<p><strong>ಮಂಗಳೂರು: </strong>ಆಯುಧಪೂಜೆಯ ಅಂಗವಾಗಿ ಗುರುವಾರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡ ಲಾಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿರುವುದನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯ ಕೇಳಿ ಬಂದಿದೆ.</p>.<p>ನಗರದ ವಿಶ್ವ ಹಿಂದೂ ಪರಿಷತ್ ಕಚೇರಿ ‘ವಿಶ್ವ ಶ್ರೀ’ ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ. ಈ ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷತ್ನ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್, ‘ನಾವು ಬಾಂಬ್, ಗ್ರೆನೇಡ್ ದೀಕ್ಷೆ ಕೊಟ್ಟಿಲ್ಲ. ತ್ರಿಶೂಲ ದೀಕ್ಷೆ ಕೊಟ್ಟಿದ್ದೇವೆ. ಪ್ರತಿವರ್ಷ ಬಜರಂಗ ದಳದ ಹೊಸ ಕಾರ್ಯಕರ್ತರಿಗೆ ಈ ದೀಕ್ಷೆ ನೀಡಲಾಗುತ್ತಿದೆ. ಎರಡು ವರ್ಷ ಕೋವಿಡ್–19 ನಿಂದಾಗಿ ಕಾರ್ಯಕ್ರಮ ನಡೆದಿರಲಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>‘ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬಲು ಸಾಂಕೇತಿಕವಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿಲ್ಲ’ ಎಂದು ಹೇಳಿದ್ದಾರೆ.</p>.<p class="Subhead">ಪರಿಶೀಲಿಸಿ ಕ್ರಮ: ‘ಮಂಗಳೂರು ನಗರ ಸೇರಿದಂತೆ ಜಿಲ್ಲೆ ಹಾಗೂ ಪಕ್ಕದ ಜಿಲ್ಲೆಯಲ್ಲಿ ಹಲವು ಕಡೆ ತ್ರಿಶೂಲ ದೀಕ್ಷೆಯ ಬಗ್ಗೆ ಮಾಹಿತಿ ದೊರೆತಿದೆ. ಈ ಬಗ್ಗೆ ಪರಿಶೀಲಿಸಲಾಗಿದ್ದು, ಪ್ರತಿ ವರ್ಷ ಆಯುಧಪೂಜೆಯ ಸಂದರ್ಭದಲ್ಲಿ ಸಾಂಕೇತಿಕವಾಗಿ ತ್ರಿಶೂಲ ದೀಕ್ಷೆ ಮಾಡುತ್ತಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನಿಗೆ ವಿರುದ್ಧವಾಗಿದ್ದರೆ ಕ್ರಮ ಜರುಗಿಸಲಾಗುವುದು’ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>ಆಯುಧಪೂಜೆಯ ಅಂಗವಾಗಿ ಗುರುವಾರ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಬಜರಂಗದಳ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡ ಲಾಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಸಾರ್ವಜನಿಕವಾಗಿ ಆಯುಧ ಪ್ರದರ್ಶಿಸಿರುವುದನ್ನು ಗಂಭೀರವಾಗಿ ಪರಿಗಣಿಸುವಂತೆ ಒತ್ತಾಯ ಕೇಳಿ ಬಂದಿದೆ.</p>.<p>ನಗರದ ವಿಶ್ವ ಹಿಂದೂ ಪರಿಷತ್ ಕಚೇರಿ ‘ವಿಶ್ವ ಶ್ರೀ’ ಸೇರಿದಂತೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಕಾರ್ಯಕರ್ತರಿಗೆ ತ್ರಿಶೂಲ ದೀಕ್ಷೆ ನೀಡಲಾಗಿದೆ. ಈ ಕಾರ್ಯಕ್ರಮದ ವಿಡಿಯೊ ಹಾಗೂ ಫೋಟೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.</p>.<p>ಈ ಬಗ್ಗೆ ಪ್ರತಿಕ್ರಿಯಿಸಿರುವ ವಿಶ್ವ ಹಿಂದೂ ಪರಿಷತ್ನ ವಿಭಾಗೀಯ ಕಾರ್ಯದರ್ಶಿ ಶರಣ್ ಪಂಪ್ವೆಲ್, ‘ನಾವು ಬಾಂಬ್, ಗ್ರೆನೇಡ್ ದೀಕ್ಷೆ ಕೊಟ್ಟಿಲ್ಲ. ತ್ರಿಶೂಲ ದೀಕ್ಷೆ ಕೊಟ್ಟಿದ್ದೇವೆ. ಪ್ರತಿವರ್ಷ ಬಜರಂಗ ದಳದ ಹೊಸ ಕಾರ್ಯಕರ್ತರಿಗೆ ಈ ದೀಕ್ಷೆ ನೀಡಲಾಗುತ್ತಿದೆ. ಎರಡು ವರ್ಷ ಕೋವಿಡ್–19 ನಿಂದಾಗಿ ಕಾರ್ಯಕ್ರಮ ನಡೆದಿರಲಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.</p>.<p>‘ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ತುಂಬಲು ಸಾಂಕೇತಿಕವಾಗಿ ಈ ಕಾರ್ಯಕ್ರಮ ನಡೆಸಲಾಗುತ್ತಿದೆ. ಇದು ಕಾನೂನಿಗೆ ವಿರುದ್ಧವಾಗಿಲ್ಲ’ ಎಂದು ಹೇಳಿದ್ದಾರೆ.</p>.<p class="Subhead">ಪರಿಶೀಲಿಸಿ ಕ್ರಮ: ‘ಮಂಗಳೂರು ನಗರ ಸೇರಿದಂತೆ ಜಿಲ್ಲೆ ಹಾಗೂ ಪಕ್ಕದ ಜಿಲ್ಲೆಯಲ್ಲಿ ಹಲವು ಕಡೆ ತ್ರಿಶೂಲ ದೀಕ್ಷೆಯ ಬಗ್ಗೆ ಮಾಹಿತಿ ದೊರೆತಿದೆ. ಈ ಬಗ್ಗೆ ಪರಿಶೀಲಿಸಲಾಗಿದ್ದು, ಪ್ರತಿ ವರ್ಷ ಆಯುಧಪೂಜೆಯ ಸಂದರ್ಭದಲ್ಲಿ ಸಾಂಕೇತಿಕವಾಗಿ ತ್ರಿಶೂಲ ದೀಕ್ಷೆ ಮಾಡುತ್ತಿರುವುದಾಗಿ ಆಯೋಜಕರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಕಾನೂನಿಗೆ ವಿರುದ್ಧವಾಗಿದ್ದರೆ ಕ್ರಮ ಜರುಗಿಸಲಾಗುವುದು’ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>