ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಳಸಿ ಹಾಕಿದ ನೀರು ಕುಡಿದರೆ ಕೊರೋನಾ ಬಾರದು: ಪ್ರಜ್ಞಾ ಸಿಂಗ್‌

Last Updated 24 ಡಿಸೆಂಬರ್ 2022, 22:15 IST
ಅಕ್ಷರ ಗಾತ್ರ

ಮಂಗಳೂರು: ‘ನಾನು ತುಳಸಿ ಮಾಲೆಯನ್ನು ಧರಿಸುತ್ತೇನೆ. ತುಳಸಿಯು ಹೆಚ್ಚಿನ ಆಮ್ಲಜನಕವನ್ನು ನೀಡುತ್ತದೆ. ತುಳಸಿ ಎಲೆ ಹಾಕಿದ ನೀರನ್ನು ಸೇವಿಸಿದರೆ ಕೊರೋನಾ ಬರುವುದಿಲ್ಲ’ ಎಂದು ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ತಿಳಿಸಿದರು.

ಶಿವಮೊಗ್ಗದಲ್ಲಿ ಹಿಂದೂ ಜಾಗರಣ ಮಂಚ್‌ನ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಿಮಾನದಲ್ಲಿ ಬಜಪೆಯ ಅಂತರರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಶನಿವಾರ ಬಂದಿಳಿದ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

‘ಕೊರೋನಾ ಮತ್ತೆ ಎಚ್ಚರಿಕೆ ನೀಡುತ್ತಿದೆ. ಎಲ್ಲರೂ ಮಾಸ್ಕ್‌ ಧರಿಸಿ. ಆರೋಗ್ಯದಿಂದ ಇರಿ’ ಎಂದು ಕಿವಿಮಾತು ಹೇಳಿದರು.

‘ಮಂಗಳೂರಿಗೆ ಬಂದಿದ್ದು ಖುಷಿ ಕೊಟ್ಟಿದೆ. ಇಲ್ಲಿನ ಕಾರ್ಯಕರ್ತರು ಒಳ್ಳೆಯವರು. ಎಲ್ಲರಿಗೂ ಶುಭಾಶಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT