<p><strong>ಹೊಸಪೇಟೆ (ವಿಜಯನಗರ)</strong>: ತುಂಗಭದ್ರಾ ಅಣೆಕಟ್ಟೆಯ ಕ್ರೆಸ್ಟ್ಗೇಟ್ ಅಳವಡಿಕೆಗಾಗಿ ಆಂಧ್ರಪ್ರದೇಶ ನೀಡಿದ್ದ ಹಣದಲ್ಲಿ ₹10 ಕೋಟಿ ತಡೆಹಿಡಿದಿದ್ದ ರಾಜ್ಯ ಸರ್ಕಾರ ಅದನ್ನು ಬಿಡುಗಡೆ ಮಾಡಿದೆ ಎಂದು ಸಂಸದ ಇ.ತುಕಾರಾಂ ತಿಳಿಸಿದರು.</p><p>‘ಹಣ ತಡೆಹಿಡಿದ ಕುರಿತಂತೆ ಜನವರಿ 23 ಮತ್ತು 28ರಂದು ‘ಪ್ರಜಾವಾಣಿ’ ವರದಿ ಮಾಡಿತ್ತು. ನಾನು ತಕ್ಷಣ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಕಾಮಗಾರಿಗೆ ಧಕ್ಕೆ ಆಗಬಾರದೆಂದು ತಿಳಿಸಿದ್ದೆ. ನನ್ನ ಮನವಿಗೆ ಸ್ಪಂದಿಸಿ ತುಂಗಭದ್ರಾ ಮಂಡಳಿಗೆ ₹10 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಖಜಾನೆ ಇಲಾಖೆ ಆಯುಕ್ತರಿಗೆ ಫೆ.2ರಂದು ಸೂಚನೆ ನೀಡಿದ್ದಾರೆ, ಅದರ ಪ್ರತಿಯನ್ನು ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಅವರಿಗೂ ಕಳುಹಿಸಲಾಗಿದೆ’ ಎಂದು ಅವರು ಶುಕ್ರವಾರ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p><p><strong>ತಿಂಗಳಾಂತ್ಯಕ್ಕೆ 20 ಗೇಟ್ ಸಿದ್ಧ</strong></p><p>‘ತುಂಗಭದ್ರಾ ಅಣೆಕಟ್ಟೆಯಲ್ಲಿ ಗೇಟ್ ಅಳವಡಿಕೆ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಫೆ.ಅಂತ್ಯದೊಳಗೆ 20 ಗೇಟ್ಗಳನ್ನು ಅಳವಡಿಸುವ ಭರವಸೆಯನ್ನು ತುಂಗಭದ್ರಾ ಮಂಡಳಿಯವರು ನನಗೆ ನೀಡಿದ್ದಾರೆ’ ಎಂದು ಸಂಸದರು ಹೇಳಿದರು.</p><p>ಗೇಟ್ ತಜ್ಞ ಕನ್ಹಯ್ಯ ನಾಯ್ಡು ಅವರು ಜನವರಿ 20ರಂದು ಗೇಟ್ ಪರಿಶೀಲನೆಗೆ ಬಂದವರು ರಾಜ್ಯ ಸರ್ಕಾರ ₹10 ಕೋಟಿ ತಡೆಹಿಡಿದ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಹೇಳಿದ್ದರು. ಆ ಸುದ್ದಿ ಜ.23ರಂದು ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಅದರ ಬಳಿಕ ಹಲವು ಸಚಿವರು ಸರ್ಕಾರ ದುಡ್ಡು ತಡೆಹಿಡಿದಿಲ್ಲ ಎಂದು ಹೇಳಿಕೊಂಡಿದ್ದರು. ತುಂಗಭದ್ರಾ ಮಂಡಳಿಯ ಕಾರ್ಯದರ್ಶಿಯವರೇ ರಾಜ್ಯ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುವಂತೆ ಪತ್ರ ಬರೆದ ವಿಚಾರವನ್ನು ಜನವರಿ 28ರಂದು ಪತ್ರಿಕೆ ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಪೇಟೆ (ವಿಜಯನಗರ)</strong>: ತುಂಗಭದ್ರಾ ಅಣೆಕಟ್ಟೆಯ ಕ್ರೆಸ್ಟ್ಗೇಟ್ ಅಳವಡಿಕೆಗಾಗಿ ಆಂಧ್ರಪ್ರದೇಶ ನೀಡಿದ್ದ ಹಣದಲ್ಲಿ ₹10 ಕೋಟಿ ತಡೆಹಿಡಿದಿದ್ದ ರಾಜ್ಯ ಸರ್ಕಾರ ಅದನ್ನು ಬಿಡುಗಡೆ ಮಾಡಿದೆ ಎಂದು ಸಂಸದ ಇ.ತುಕಾರಾಂ ತಿಳಿಸಿದರು.</p><p>‘ಹಣ ತಡೆಹಿಡಿದ ಕುರಿತಂತೆ ಜನವರಿ 23 ಮತ್ತು 28ರಂದು ‘ಪ್ರಜಾವಾಣಿ’ ವರದಿ ಮಾಡಿತ್ತು. ನಾನು ತಕ್ಷಣ ರಾಜ್ಯ ಸರ್ಕಾರದೊಂದಿಗೆ ಚರ್ಚಿಸಿ ಕಾಮಗಾರಿಗೆ ಧಕ್ಕೆ ಆಗಬಾರದೆಂದು ತಿಳಿಸಿದ್ದೆ. ನನ್ನ ಮನವಿಗೆ ಸ್ಪಂದಿಸಿ ತುಂಗಭದ್ರಾ ಮಂಡಳಿಗೆ ₹10 ಕೋಟಿ ಬಿಡುಗಡೆ ಮಾಡುವಂತೆ ಆರ್ಥಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರು ಖಜಾನೆ ಇಲಾಖೆ ಆಯುಕ್ತರಿಗೆ ಫೆ.2ರಂದು ಸೂಚನೆ ನೀಡಿದ್ದಾರೆ, ಅದರ ಪ್ರತಿಯನ್ನು ತುಂಗಭದ್ರಾ ಮಂಡಳಿಯ ಕಾರ್ಯದರ್ಶಿ ಅವರಿಗೂ ಕಳುಹಿಸಲಾಗಿದೆ’ ಎಂದು ಅವರು ಶುಕ್ರವಾರ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು.</p><p><strong>ತಿಂಗಳಾಂತ್ಯಕ್ಕೆ 20 ಗೇಟ್ ಸಿದ್ಧ</strong></p><p>‘ತುಂಗಭದ್ರಾ ಅಣೆಕಟ್ಟೆಯಲ್ಲಿ ಗೇಟ್ ಅಳವಡಿಕೆ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಫೆ.ಅಂತ್ಯದೊಳಗೆ 20 ಗೇಟ್ಗಳನ್ನು ಅಳವಡಿಸುವ ಭರವಸೆಯನ್ನು ತುಂಗಭದ್ರಾ ಮಂಡಳಿಯವರು ನನಗೆ ನೀಡಿದ್ದಾರೆ’ ಎಂದು ಸಂಸದರು ಹೇಳಿದರು.</p><p>ಗೇಟ್ ತಜ್ಞ ಕನ್ಹಯ್ಯ ನಾಯ್ಡು ಅವರು ಜನವರಿ 20ರಂದು ಗೇಟ್ ಪರಿಶೀಲನೆಗೆ ಬಂದವರು ರಾಜ್ಯ ಸರ್ಕಾರ ₹10 ಕೋಟಿ ತಡೆಹಿಡಿದ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ ಎಂದು ಹೇಳಿದ್ದರು. ಆ ಸುದ್ದಿ ಜ.23ರಂದು ಪತ್ರಿಕೆಯಲ್ಲಿ ಪ್ರಕಟವಾಗಿತ್ತು. ಅದರ ಬಳಿಕ ಹಲವು ಸಚಿವರು ಸರ್ಕಾರ ದುಡ್ಡು ತಡೆಹಿಡಿದಿಲ್ಲ ಎಂದು ಹೇಳಿಕೊಂಡಿದ್ದರು. ತುಂಗಭದ್ರಾ ಮಂಡಳಿಯ ಕಾರ್ಯದರ್ಶಿಯವರೇ ರಾಜ್ಯ ಸರ್ಕಾರಕ್ಕೆ ಹಣ ಬಿಡುಗಡೆ ಮಾಡುವಂತೆ ಪತ್ರ ಬರೆದ ವಿಚಾರವನ್ನು ಜನವರಿ 28ರಂದು ಪತ್ರಿಕೆ ವರದಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>