<p><strong>ಬೆಂಗಳೂರು: </strong>ವೃದ್ಧನ ಮೇಲಿನ ಹಲ್ಲೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆದ ಪ್ರಕರಣದಲ್ಲಿ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನಿಶ್ ಮಹೇಶ್ವರಿಗೆ ಉತ್ತರ ಪ್ರದೇಶ ಪೊಲೀಸರು ನೀಡಿದ್ದ ನೋಟಿಸ್ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.</p>.<p>‘ಅರ್ಜಿದಾರರ ಮನಿಶ್ ಅವರನ್ನು ಎಫ್ಐಆರ್ನಲ್ಲಿ ಆರೋಪಿಯಾಗಿ ಮಾಡಿಲ್ಲ. ವಿಡಿಯೊ ಸಂವಾದದ ಮೂಲಕ ಅರ್ಜಿದಾರರ ವಿಚಾರಣೆ ನಡೆಸಲು ಸಾಧ್ಯವಿದ್ದರೂ ಸಿಆರ್ಪಿಸಿ ಸೆಕ್ಷನ್ 160 ಅಡಿಯಲ್ಲಿ ನೋಟಿಸ್ ನೀಡಲಾಗಿದೆ’ ಎಂದು ನ್ಯಾಯಮೂರ್ತಿ ಜಿ. ನಾಗೇಂದ್ರ ಅವರಿದ್ದ ಪೀಠ ಹೇಳಿದೆ.</p>.<p>‘ಮುಸ್ಲಿಂ ವ್ಯಕ್ತಿಯೊಬ್ಬರಿಗೆ ‘ಜೈ ಶ್ರೀರಾಮ್’ ಮತ್ತು ‘ವಂದೇ ಮಾತರಂ’ ಹೇಳುವಂತೆ ಒತ್ತಾಯಿಸುತ್ತಿರುವುದು ವಿಡಿಯೊದಲ್ಲಿದೆ. ಇದು ವೈಯಕ್ತಿಕ ದಾಳಿ ಎಂದು ತಿಳಿಸಿದ್ದರೂ ತಪ್ಪು ಮಾಹಿತಿ ಇರುವ ವಿಡಿಯೊ ಹರಡುವುದನ್ನು ತಡೆಯಲು ಟ್ವಿಟರ್ ಕ್ರಮ ಕೈಗೊಂಡಿಲ್ಲ’ ಎಂಬುದು ಪೊಲೀಸರ ಆರೋಪ.</p>.<p>‘ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಹಾಜರಾಗುವುದಾಗಿ ತಿಳಿಸಿದ್ದರೂ ಖುದ್ದು ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಕರೆದು ಬಂಧಿಸುವ ಸಾಧ್ಯತೆ ಇದೆ’ ಎಂದು ಮನಿಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಟ್ವಿಟರ್ ಇಂಡಿಯಾ ಮತ್ತು ಟ್ವಿಟರ್ ಇಂಕ್ ಎರಡೂ ವಿಭಿನ್ನ ಘಟಕಗಳು. ಟ್ವಿಟರ್ನಲ್ಲಿ ಹರಡುವ ಸಂದೇಶಗಳು ಇವರ ನಿಯಂತ್ರಣಕ್ಕೆ ಸಿಗುವುದಿಲ್ಲ. ಅರ್ಜಿದಾರರ ವಿರುದ್ಧದ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಯನ್ನು ಉತ್ತರ ಪ್ರದೇಶ ಪೊಲೀಸರು ಸಲ್ಲಿಸಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೃದ್ಧನ ಮೇಲಿನ ಹಲ್ಲೆಗೆ ಸಂಬಂಧಿಸಿದ ವಿಡಿಯೊ ವೈರಲ್ ಆದ ಪ್ರಕರಣದಲ್ಲಿ ಟ್ವಿಟರ್ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮನಿಶ್ ಮಹೇಶ್ವರಿಗೆ ಉತ್ತರ ಪ್ರದೇಶ ಪೊಲೀಸರು ನೀಡಿದ್ದ ನೋಟಿಸ್ ರದ್ದುಪಡಿಸಿ ಹೈಕೋರ್ಟ್ ಆದೇಶಿಸಿದೆ.</p>.<p>‘ಅರ್ಜಿದಾರರ ಮನಿಶ್ ಅವರನ್ನು ಎಫ್ಐಆರ್ನಲ್ಲಿ ಆರೋಪಿಯಾಗಿ ಮಾಡಿಲ್ಲ. ವಿಡಿಯೊ ಸಂವಾದದ ಮೂಲಕ ಅರ್ಜಿದಾರರ ವಿಚಾರಣೆ ನಡೆಸಲು ಸಾಧ್ಯವಿದ್ದರೂ ಸಿಆರ್ಪಿಸಿ ಸೆಕ್ಷನ್ 160 ಅಡಿಯಲ್ಲಿ ನೋಟಿಸ್ ನೀಡಲಾಗಿದೆ’ ಎಂದು ನ್ಯಾಯಮೂರ್ತಿ ಜಿ. ನಾಗೇಂದ್ರ ಅವರಿದ್ದ ಪೀಠ ಹೇಳಿದೆ.</p>.<p>‘ಮುಸ್ಲಿಂ ವ್ಯಕ್ತಿಯೊಬ್ಬರಿಗೆ ‘ಜೈ ಶ್ರೀರಾಮ್’ ಮತ್ತು ‘ವಂದೇ ಮಾತರಂ’ ಹೇಳುವಂತೆ ಒತ್ತಾಯಿಸುತ್ತಿರುವುದು ವಿಡಿಯೊದಲ್ಲಿದೆ. ಇದು ವೈಯಕ್ತಿಕ ದಾಳಿ ಎಂದು ತಿಳಿಸಿದ್ದರೂ ತಪ್ಪು ಮಾಹಿತಿ ಇರುವ ವಿಡಿಯೊ ಹರಡುವುದನ್ನು ತಡೆಯಲು ಟ್ವಿಟರ್ ಕ್ರಮ ಕೈಗೊಂಡಿಲ್ಲ’ ಎಂಬುದು ಪೊಲೀಸರ ಆರೋಪ.</p>.<p>‘ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆ ಹಾಜರಾಗುವುದಾಗಿ ತಿಳಿಸಿದ್ದರೂ ಖುದ್ದು ಹಾಜರಾಗಲು ಪೊಲೀಸರು ನೋಟಿಸ್ ನೀಡಿದ್ದಾರೆ. ವಿಚಾರಣೆಗೆ ಕರೆದು ಬಂಧಿಸುವ ಸಾಧ್ಯತೆ ಇದೆ’ ಎಂದು ಮನಿಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.</p>.<p>ಟ್ವಿಟರ್ ಇಂಡಿಯಾ ಮತ್ತು ಟ್ವಿಟರ್ ಇಂಕ್ ಎರಡೂ ವಿಭಿನ್ನ ಘಟಕಗಳು. ಟ್ವಿಟರ್ನಲ್ಲಿ ಹರಡುವ ಸಂದೇಶಗಳು ಇವರ ನಿಯಂತ್ರಣಕ್ಕೆ ಸಿಗುವುದಿಲ್ಲ. ಅರ್ಜಿದಾರರ ವಿರುದ್ಧದ ಆರೋಪ ಸಾಬೀತುಪಡಿಸುವ ಯಾವುದೇ ದಾಖಲೆಯನ್ನು ಉತ್ತರ ಪ್ರದೇಶ ಪೊಲೀಸರು ಸಲ್ಲಿಸಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>