ಪಕ್ಷಕ್ಕಾಗಿ ದುಡಿದವರಿಗೆ ಸ್ಥಾನಮಾನ ನೀಡಲಾಗುವುದು. ಅವರು ಪ್ರತಿನಿಧಿಸುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎಷ್ಟು ಮತಗಳು ಬಂದಿವೆ ಎಂಬುದನ್ನೂ ಪರಿಗಣಿಸಲಾಗುವುದು. ಮತಗಟ್ಟೆಯಲ್ಲಿ ಮುನ್ನಡೆ ಕೊಡಿಸಲಾಗದವರಿಗೆ ಹುದ್ದೆ ಕೊಡುವುದರಲ್ಲಿ ಅರ್ಥವಿಲ್ಲ ಎಂದರು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಜತೆ ಸಭೆ ನಡೆಸಿ ಅವರ ಅಹವಾಲು ಆಲಿಸಲಾಗುವುದು. ಸಚಿವರು ಪ್ರವಾಸದ ಅವಧಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಗಳಿಗೆ ಭೇಟಿನೀಡುವುದು ಕಡ್ಡಾಯ ಎಂದು ಹೇಳಿದರು.
ಬಿಬಿಎಂಪಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಬಾಕಿ ಇರುವ ಎಲ್ಲ ಚುನಾವಣೆಗಳನ್ನು ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧವಿದೆ. ನ್ಯಾಯಾಲಯದ ಅನುಮತಿ ಪಡೆದು ಚುನಾವಣಾ ಪ್ರಕ್ರಿಯೆ ಆರಂಭಿಸಲಾಗುವುದು ಎಂದರು