ಮಂಗಳೂರು: ‘ಹೈಕೋರ್ಟ್ ತೀರ್ಪಿಗೆ ಅಲ್ಲ, ಎಬಿವಿಪಿ ಮುಖಂಡರ ಒತ್ತಡಕ್ಕೆ ಮಣಿದು ಮಂಗಳೂರು ವಿಶ್ವ
ವಿದ್ಯಾಲಯ ಕಾಲೇಜಿನ ಪ್ರಾಂಶುಪಾಲರು ಹಿಜಾಬ್ ನಿಷೇಧಿಸಿದ್ದಾರೆ ಎಂದು ಮಂಗಳೂರು ವಿವಿ ವಿದ್ಯಾರ್ಥಿ ಸಮನ್ವಯ ಸಮಿತಿ ಆರೋಪಿಸಿದೆ. ಎರಡು ದಿನದಲ್ಲಿ ಸಮಸ್ಯೆ ಪರಿಹರಿಸದೇ ಇದ್ದರೆ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದೆ.