ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನಲ್ಲಿ ಆಲಿಕಲ್ಲು ಮಳೆಗೆ 61.19 ಎಕರೆ ಬಾಳೆಗೆ ಹಾನಿಯಾಗಿದೆ. ತಾಲ್ಲೂಕಿನ ಚಿಕ್ಕಜಾಯಿಗನೂರು, ದೇವಸಮುದ್ರ, ಶಾಂತಿನಗರ, ನೆಲ್ಲೂಡಿ ಸೇರಿ ಕೆಲ ಗ್ರಾಮಗಳಲ್ಲಿ ಹಲವು ಶೆಡ್ಗಳಿಗೆ ಹಾಕಿದ ತಗಡುಗಳು ಹಾರಿ ಹೋಗಿವೆ. ಮರ, ವಿದ್ಯುತ್ ಪರಿವರ್ತಕ, ಕಂಬಗಳು ಬಿದ್ದಿವೆ. ಎಮ್ಮಿಗನೂರು ಗ್ರಾಮದ ತಿಮ್ಮನಕೇರಿ ಕ್ಯಾಂಪ್ನಲ್ಲಿ ಭತ್ತದ ಹುಲ್ಲಿನ ಬಣವಿ ಸಿಡಿಲಿಗೆ ಸಂಪೂರ್ಣ ಸುಟ್ಟು ಹೋಗಿದೆ.