ಕಳೆದ ವರ್ಷದ ಏ.1ರಂದು ವಿರಾಜಪೇಟೆ ತಾಲ್ಲೂಕಿನ ಅರ್ವತೊಕ್ಲು ಗ್ರಾಮದಲ್ಲಿ ಮರದಿಂದ ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿ ಮೇಲೆಯೇ ಅಲ್ಯುಮಿನಿಯಂಏಣಿ ಬಿದ್ದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದರು. ಅದಾದ ಮೇಲೆ ಮೇ 18ರಂದು ದೊಡ್ಡಪುಲಿಕೋಟು ಎಂಬಲ್ಲಿ ಅಲ್ಯುಮಿನಿಯಂಏಣಿಸಹಾಯದಿಂದ ಮರದ ರೆಂಬೆ ಕತ್ತರಿಸುವಾಗ ವಿದ್ಯುತ್ ಪ್ರವಹಿಸಿ, ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು.