ಬೆಂಗಳೂರು: ರಾಷ್ಟ್ರರಕ್ಷಣಾ ಪಡೆ ಸಂಘಟನೆ ಮುಖಂಡ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ಉಪ್ಪಾರಪೇಟೆ ಹಾಗೂ ವಿ.ವಿ ಪುರಂ ಪೊಲೀಸ್ ಠಾಣೆಯಲ್ಲಿ ಮತ್ತೆ ಎರಡು ಎಫ್ಐಆರ್ಗಳು ದಾಖಲಾಗಿವೆ. ಉಪ್ಪಾರಪೇಟೆಯಲ್ಲಿ ಆತ್ಮಹತ್ಯೆಗೆ ಯತ್ನ ಆರೋಪದ ಅಡಿ ಪ್ರಕರಣ ದಾಖಲಾಗಿದ್ದರೆ, ವಿ.ವಿ ಪುರಂನಲ್ಲಿ ಕಾನೂನು ವ್ಯವಸ್ಥೆಗೆ ಧಕ್ಕೆ ಆರೋಪದ ಅಡಿ ಪ್ರಕರಣ ದಾಖಲಾಗಿದೆ.
ಪುನೀತ್ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಸೇರಿ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಆರೋಪದ ಅಡಿ ಪ್ರಕರಣಗಳು ದಾಖಲಾಗಿದ್ದವು. ಚಾಮರಾಜಪೇಟೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವರದಿ ಆಧರಿಸಿ, ಪುನೀತ್ ಕೆರೆಹಳ್ಳಿ ಹೆಸರನ್ನು ರೌಡಿಪಟ್ಟಿಗೆ ಈ ಹಿಂದೆ ಸೇರ್ಪಡೆ ಮಾಡಲಾಗಿತ್ತು. ಅದಾದ ಮೇಲೆ ಪುನೀತ್ ಬಂಧನವಾಗಿತ್ತು. ಜಾಮೀನನ ಮೇಲೆ ಅವರು ಇತ್ತೀಚೆಗೆ ಬಿಡುಗಡೆಯಾಗಿದ್ದರು.