<p><strong>ಬಾಗಲಕೋಟೆ</strong>: ’ಪರಿಸರವಾದಿಗಳ ಹೆಸರಿನಲ್ಲಿ ಕೆಲವರು ಅನಗತ್ಯ ತೊಂದರೆ ನೀಡುತ್ತಿರುವ ಕಾರಣ ಬೆಂಗಳೂರು ನಗರದ ಸುತ್ತಲೂ ₹2 ಕೋಟಿ ಮೊತ್ತದ ರಸ್ತೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿವೆ'ಎಂದು ಲೋಕೋಪಯೋಗಿ ಇಲಾಖೆ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಸೋಮವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>’ಕಾಮಗಾರಿ ಅನುಷ್ಠಾನಕ್ಕೆ ಮುನ್ನವೇ ಮರ ಕಡಿಯುತ್ತಾರೆ ಎಂದು ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿದ್ದಾರೆ. ಇದರಿಂದ ಲೋಕೋಪಯೋಗಿ ಇಲಾಖೆಯ ರಸ್ತೆ ನಿರ್ಮಾಣ ಯೋಜನೆಗಳು ನನೆಗುದಿಗೆ ಬಿದ್ದಿವೆ. ಹೊಸ ರಸ್ತೆಗಳು ನಿರ್ಮಾಣವಾಗದೇ ಬೆಂಗಳೂರಿನ ಜನರು ವಿಪರೀತ ವಾಹನ ದಟ್ಟಣೆಯಿಂದ ನರಕಸದೃಶ ಜೀವನ ನಡೆಸಬೇಕಾಗಿದೆ‘ ಎಂದರು.</p>.<p>ಬೆಂಗಳೂರು ಸುತ್ತಲೂ ಸ್ಥಗಿತಗೊಂಡಿರುವ ರಸ್ತೆ ಯೋಜನೆಗಳಿಗೆ ನಿಗದಿಯಾಗಿರುವ ಅನುದಾನ ಅಲ್ಲಿ ಬಳಕೆಯಾಗದಿದ್ದರೆ ಉತ್ತರ ಕರ್ನಾಟಕ ಭಾಗಕ್ಕೆ ವರ್ಗಾಯಿಸಿ ಎಂದು ಪಕ್ಕದಲ್ಲಿದ್ದ ಶಾಸಕ ವೀರಣ್ಣ ಚರಂತಿಮಠ ಚಟಾಕಿ ಹಾರಿಸಿದರು. ಆಗ ಸಭೆ ನಗೆಗಡಲಲ್ಲಿ ತೇಲಿತು.</p>.<p class="Subhead"><strong>ರೇಷ್ಮೆ, ಮೀನುಗಾರಿಕೆ ಇಲಾಖೆ ವಿಲೀನಗೊಳಿಸಿ: </strong>ಜಿಲ್ಲೆಯಲ್ಲಿ ವಾರ್ಷಿಕ ₹50 ಲಕ್ಷ ಮೊತ್ತದ ರೇಷ್ಮೆ ಉತ್ಪಾದನೆ ಮಾಡುವುದಿಲ್ಲ. ಆದರೆ ಆ ಇಲಾಖೆಯ ಅಧಿಕಾರಿ– ಸಿಬ್ಬಂದಿಗಳಿಗೆ ವೇತನಕ್ಕೆಂದೇ ₹3 ಕೋಟಿ ಖರ್ಚು ಮಾಡಲಾಗುತ್ತಿದೆ. ಕೆಲಸ ಇಲ್ಲದೇ ಖಾಲಿ ಕುಳಿತು ರಾಜಕಾರಣ ಮಾಡುತ್ತಿದ್ದಾರೆ. ಅವರನ್ನು ಬೇರೆ ಇಲಾಖೆಗಳಿಗೆ ನಿಯೋಜನೆ ಮಾಡಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು. ಆ ಎರಡೂ ಇಲಾಖೆಗಳನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸಲು ಸಿಎಂಗೆ ಮನವಿ ಮಾಡುವೆ ಎಂದರು.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆಯಲ್ಲಿ ರೇಷ್ಮೆ ವಿಲೀನಗೊಳಿಸಲು ಕಳೆದ ವಾರ ಆಡಳಿತ ಸುಧಾರಣಾ ಸಮಿತಿ ಶಿಫಾರಸು ಮಾಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ’ಪರಿಸರವಾದಿಗಳ ಹೆಸರಿನಲ್ಲಿ ಕೆಲವರು ಅನಗತ್ಯ ತೊಂದರೆ ನೀಡುತ್ತಿರುವ ಕಾರಣ ಬೆಂಗಳೂರು ನಗರದ ಸುತ್ತಲೂ ₹2 ಕೋಟಿ ಮೊತ್ತದ ರಸ್ತೆ ನಿರ್ಮಾಣ ಕಾಮಗಾರಿ ಸ್ಥಗಿತಗೊಂಡಿವೆ'ಎಂದು ಲೋಕೋಪಯೋಗಿ ಇಲಾಖೆ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಬೇಸರ ವ್ಯಕ್ತಪಡಿಸಿದರು.</p>.<p>ಇಲ್ಲಿನ ಜಿಲ್ಲಾ ಪಂಚಾಯ್ತಿ ಕೆಡಿಪಿ ಸಭೆಯಲ್ಲಿ ಸೋಮವಾರ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.</p>.<p>’ಕಾಮಗಾರಿ ಅನುಷ್ಠಾನಕ್ಕೆ ಮುನ್ನವೇ ಮರ ಕಡಿಯುತ್ತಾರೆ ಎಂದು ಕೆಲವರು ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಿದ್ದಾರೆ. ಇದರಿಂದ ಲೋಕೋಪಯೋಗಿ ಇಲಾಖೆಯ ರಸ್ತೆ ನಿರ್ಮಾಣ ಯೋಜನೆಗಳು ನನೆಗುದಿಗೆ ಬಿದ್ದಿವೆ. ಹೊಸ ರಸ್ತೆಗಳು ನಿರ್ಮಾಣವಾಗದೇ ಬೆಂಗಳೂರಿನ ಜನರು ವಿಪರೀತ ವಾಹನ ದಟ್ಟಣೆಯಿಂದ ನರಕಸದೃಶ ಜೀವನ ನಡೆಸಬೇಕಾಗಿದೆ‘ ಎಂದರು.</p>.<p>ಬೆಂಗಳೂರು ಸುತ್ತಲೂ ಸ್ಥಗಿತಗೊಂಡಿರುವ ರಸ್ತೆ ಯೋಜನೆಗಳಿಗೆ ನಿಗದಿಯಾಗಿರುವ ಅನುದಾನ ಅಲ್ಲಿ ಬಳಕೆಯಾಗದಿದ್ದರೆ ಉತ್ತರ ಕರ್ನಾಟಕ ಭಾಗಕ್ಕೆ ವರ್ಗಾಯಿಸಿ ಎಂದು ಪಕ್ಕದಲ್ಲಿದ್ದ ಶಾಸಕ ವೀರಣ್ಣ ಚರಂತಿಮಠ ಚಟಾಕಿ ಹಾರಿಸಿದರು. ಆಗ ಸಭೆ ನಗೆಗಡಲಲ್ಲಿ ತೇಲಿತು.</p>.<p class="Subhead"><strong>ರೇಷ್ಮೆ, ಮೀನುಗಾರಿಕೆ ಇಲಾಖೆ ವಿಲೀನಗೊಳಿಸಿ: </strong>ಜಿಲ್ಲೆಯಲ್ಲಿ ವಾರ್ಷಿಕ ₹50 ಲಕ್ಷ ಮೊತ್ತದ ರೇಷ್ಮೆ ಉತ್ಪಾದನೆ ಮಾಡುವುದಿಲ್ಲ. ಆದರೆ ಆ ಇಲಾಖೆಯ ಅಧಿಕಾರಿ– ಸಿಬ್ಬಂದಿಗಳಿಗೆ ವೇತನಕ್ಕೆಂದೇ ₹3 ಕೋಟಿ ಖರ್ಚು ಮಾಡಲಾಗುತ್ತಿದೆ. ಕೆಲಸ ಇಲ್ಲದೇ ಖಾಲಿ ಕುಳಿತು ರಾಜಕಾರಣ ಮಾಡುತ್ತಿದ್ದಾರೆ. ಅವರನ್ನು ಬೇರೆ ಇಲಾಖೆಗಳಿಗೆ ನಿಯೋಜನೆ ಮಾಡಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು. ಆ ಎರಡೂ ಇಲಾಖೆಗಳನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸಲು ಸಿಎಂಗೆ ಮನವಿ ಮಾಡುವೆ ಎಂದರು.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶಿವಯೋಗಿ ಕಳಸದ, ಕೃಷಿ ಇಲಾಖೆಯಲ್ಲಿ ರೇಷ್ಮೆ ವಿಲೀನಗೊಳಿಸಲು ಕಳೆದ ವಾರ ಆಡಳಿತ ಸುಧಾರಣಾ ಸಮಿತಿ ಶಿಫಾರಸು ಮಾಡಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>