ರೇಷ್ಮೆ, ಮೀನುಗಾರಿಕೆ ಇಲಾಖೆ ವಿಲೀನಗೊಳಿಸಿ: ಜಿಲ್ಲೆಯಲ್ಲಿ ವಾರ್ಷಿಕ ₹50 ಲಕ್ಷ ಮೊತ್ತದ ರೇಷ್ಮೆ ಉತ್ಪಾದನೆ ಮಾಡುವುದಿಲ್ಲ. ಆದರೆ ಆ ಇಲಾಖೆಯ ಅಧಿಕಾರಿ– ಸಿಬ್ಬಂದಿಗಳಿಗೆ ವೇತನಕ್ಕೆಂದೇ ₹3 ಕೋಟಿ ಖರ್ಚು ಮಾಡಲಾಗುತ್ತಿದೆ. ಕೆಲಸ ಇಲ್ಲದೇ ಖಾಲಿ ಕುಳಿತು ರಾಜಕಾರಣ ಮಾಡುತ್ತಿದ್ದಾರೆ. ಅವರನ್ನು ಬೇರೆ ಇಲಾಖೆಗಳಿಗೆ ನಿಯೋಜನೆ ಮಾಡಿ ಎಂದು ಜಿಲ್ಲಾಧಿಕಾರಿಗೆ ಸೂಚಿಸಿದರು. ಆ ಎರಡೂ ಇಲಾಖೆಗಳನ್ನು ಕೃಷಿ ಇಲಾಖೆಯಲ್ಲಿ ವಿಲೀನಗೊಳಿಸಲು ಸಿಎಂಗೆ ಮನವಿ ಮಾಡುವೆ ಎಂದರು.