ಮಾರ್ಚ್ 22ರಂದು ಸಾಮಾಜಿಕ ಜಾಲತಾಣದಲ್ಲಿ ಈ ಸುಳ್ಳು ಸುದ್ದಿ ಹರಿದಾಡಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಡಳಿತ, ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿತ್ತು.ಇದರ ಆಧಾರದ ಇನ್ಸ್ಪೆಕ್ಟರ್ ಪ್ರಭುಗೌಡ ಅವರ ನೇತೃತ್ವದಲ್ಲಿ ತನಿಖೆ ಕೈಗೊಂಡ ಸೈಬರ್ ವಿಭಾಗದ ಪೊಲೀಸರು, ಸುಳ್ಳು ಸುದ್ದಿ ಹರಡಿದ ಈ ಇಬ್ಬರನ್ನು ಬಂಧಿಸಿದ್ದಾರೆ.