<p><strong>ಮಂಗಳೂರು: </strong>'ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ಜಿಲ್ಲೆ ಎಂದು ಘೋಷಿಸಲ್ಪಟ್ಟಿರುವ ಕೊಡಗು ಜಿಲ್ಲೆಗೆ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆಯಾದರೂ ವಿಶೇಷ ಅನುದಾನ ಕೊಟ್ಟಿದೆಯೇ' ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಪ್ರಶ್ನಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಯೋಜನೆಗೆ ಶುಕ್ರವಾರ ಭೂಮಿ ಪೂಜೆ ನಡೆಯಿತು. ಅಲ್ಲಿ ಅನುದಾನದ ಬಗ್ಗೆ ಮಾಹಿತಿ ಇಲ್ಲದೆ ಪ್ರತಾಪ್ ಸಿಂಹ ಮಾತನಾಡಿದ್ದಾರೆ' ಎಂದರು.</p>.<p>ಮನೆಗಳಿಗೆ ಕೇಂದ್ರದ ಅನುದಾನ ಬಳಕೆ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ 'ಹುಟ್ಟುವ ಮಕ್ಕಳ ಅಪ್ಪ, ಅಮ್ಮ ಯಾರು ಎಂಬುದು ಗೊತ್ತಾಗಬೇಕು' ಎಂದು ಹೇಳಿದ್ದಾರೆ. ‘ಈ ಮಾತು ಹೇಳುವ ಮುನ್ನ ಸರಿಯಾದ ಮಾಹಿತಿ ಅವರ ಬಳಿ ಇರಬೇಕಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕರ್ನಾಟಕಕ್ಕೆ ₹ 540 ಕೋಟಿ ಮಂಜೂರು ಮಾಡಿದೆ. ಇದು ಕೊಡಗು ಜಿಲ್ಲೆಗೆ ಮಾತ್ರ ಕೊಟ್ಟ ಅನುದಾನವಲ್ಲ. ಎಂಟು ಜಿಲ್ಲೆಗಳಿಗೆ ಸೇರಿದ್ದು. ಮನೆ ನಿರ್ಮಾಣಕ್ಕೆ ಈ ಹಣ ಬಳಸುತ್ತಿಲ್ಲ. ರಾಜ್ಯ ಸರ್ಕಾರವೇ ಅನುದಾನ ಒದಗಿಸುತ್ತಿದೆ ಎಂದರು.</p>.<p>ಕೊಡಗು ಜಿಲ್ಲೆಯ ಜನರ ಬಗ್ಗೆ ಪ್ರತಾಪ್ ಸಿಂಹ ಅವರಿಗೆ ಕಾಳಜಿ ಇದ್ದರೆ ಸಂಸತ್ತಿನಲ್ಲಿ ಧ್ವನಿ ಎತ್ತಲಿ. ಕೇಂದ್ರದಿಂದ ವಿಶೇಷ ಅನುದಾನ ತರಲಿ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಗಳೂರು: </strong>'ನೈಸರ್ಗಿಕ ವಿಕೋಪಕ್ಕೆ ತುತ್ತಾಗಿರುವ ಜಿಲ್ಲೆ ಎಂದು ಘೋಷಿಸಲ್ಪಟ್ಟಿರುವ ಕೊಡಗು ಜಿಲ್ಲೆಗೆ ಕೇಂದ್ರ ಸರ್ಕಾರ ಈವರೆಗೆ ನಯಾಪೈಸೆಯಾದರೂ ವಿಶೇಷ ಅನುದಾನ ಕೊಟ್ಟಿದೆಯೇ' ಎಂದು ನಗರಾಭಿವೃದ್ಧಿ ಮತ್ತು ವಸತಿ ಸಚಿವ ಯು.ಟಿ.ಖಾದರ್ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಅವರನ್ನು ಪ್ರಶ್ನಿಸಿದರು.</p>.<p>ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 'ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಮನೆ ನಿರ್ಮಾಣ ಮಾಡುವ ಯೋಜನೆಗೆ ಶುಕ್ರವಾರ ಭೂಮಿ ಪೂಜೆ ನಡೆಯಿತು. ಅಲ್ಲಿ ಅನುದಾನದ ಬಗ್ಗೆ ಮಾಹಿತಿ ಇಲ್ಲದೆ ಪ್ರತಾಪ್ ಸಿಂಹ ಮಾತನಾಡಿದ್ದಾರೆ' ಎಂದರು.</p>.<p>ಮನೆಗಳಿಗೆ ಕೇಂದ್ರದ ಅನುದಾನ ಬಳಕೆ ಮಾಡಲಾಗುತ್ತಿದೆ ಎಂಬ ಅರ್ಥದಲ್ಲಿ 'ಹುಟ್ಟುವ ಮಕ್ಕಳ ಅಪ್ಪ, ಅಮ್ಮ ಯಾರು ಎಂಬುದು ಗೊತ್ತಾಗಬೇಕು' ಎಂದು ಹೇಳಿದ್ದಾರೆ. ‘ಈ ಮಾತು ಹೇಳುವ ಮುನ್ನ ಸರಿಯಾದ ಮಾಹಿತಿ ಅವರ ಬಳಿ ಇರಬೇಕಿತ್ತು’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕರ್ನಾಟಕಕ್ಕೆ ₹ 540 ಕೋಟಿ ಮಂಜೂರು ಮಾಡಿದೆ. ಇದು ಕೊಡಗು ಜಿಲ್ಲೆಗೆ ಮಾತ್ರ ಕೊಟ್ಟ ಅನುದಾನವಲ್ಲ. ಎಂಟು ಜಿಲ್ಲೆಗಳಿಗೆ ಸೇರಿದ್ದು. ಮನೆ ನಿರ್ಮಾಣಕ್ಕೆ ಈ ಹಣ ಬಳಸುತ್ತಿಲ್ಲ. ರಾಜ್ಯ ಸರ್ಕಾರವೇ ಅನುದಾನ ಒದಗಿಸುತ್ತಿದೆ ಎಂದರು.</p>.<p>ಕೊಡಗು ಜಿಲ್ಲೆಯ ಜನರ ಬಗ್ಗೆ ಪ್ರತಾಪ್ ಸಿಂಹ ಅವರಿಗೆ ಕಾಳಜಿ ಇದ್ದರೆ ಸಂಸತ್ತಿನಲ್ಲಿ ಧ್ವನಿ ಎತ್ತಲಿ. ಕೇಂದ್ರದಿಂದ ವಿಶೇಷ ಅನುದಾನ ತರಲಿ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>