ಪ್ರಜ್ವಲ್ ವಿರುದ್ಧ ಆರೋಪ ಕೇಳಿ ಬಂದ ತಕ್ಷಣ ಅವರ ಚಲನವಲನಗಳ ಮೇಲೆ ನಿಗಾ ವಹಿಸದೇ ಸರ್ಕಾರ ನಿರ್ಲಕ್ಷ್ಯ ಮಾಡಿದ್ದು ಸರಿಯಲ್ಲ. ಸರಣಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ವಿದೇಶಕ್ಕೆ ಪಲಾಯನ ಮಾಡಲು ಅವಕಾಶ ನೀಡಿದ್ದೇ ತಪ್ಪು. ಇದರಿಂದ ಮಹಿಳೆಯರು ಸರ್ಕಾರದ ಮೇಲೆ ಇಟ್ಟ ವಿಶ್ವಾಸಕ್ಕೆ ಚ್ಯುತಿಯಾಗಿದೆ. ಹಾಸನ ಕ್ಷೇತ್ರದ ಚುನಾವಣೆಯನ್ನು ಸ್ಥಗಿತಗೊಳಿಸದೆ ಆರೋಪಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಒದಗಿಸಿದ್ದು ಪ್ರಜಾಪ್ರಭುತ್ವ ಪ್ರಕ್ರಿಯೆಗೆ ಮಾಡಿದ ಅಪಚಾರ’ ಎಂದು ಕುಂ.ವೀರಭದ್ರಪ್ಪ, ಜಿ. ರಾಮಕೃಷ್ಣ, ವಸುಂಧರ ಭೂಪತಿ, ಕೆ. ಶರೀಫಾ, ಮೀನಾಕ್ಷಿ ಬಾಳಿ, ಎಂ.ಆರ್. ಕಮಲಾ, ಕೆ. ಫಣಿರಾಜ್, ನಾಗೇಶ ಹೆಗಡೆ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ರತಿರಾವ್ ಮತ್ತಿತರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.