<p><strong>ಬೆಂಗಳೂರು</strong>: ಸರ್ಕಾರಕ್ಕೆ ಈಚೆಗೆ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ಅವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ.</p>.<p>ಶೃಂಗೇರಿಯ ಬುಕ್ಕಡಿಬೈಲು ಬಸ್ ನಿಲ್ದಾಣದ ಅಂಗಡಿಯೊಂದರ ಗೋಡೆ ಮೇಲೆ ಲತಾ, ರವೀಂದ್ರ ಮತ್ತು ಸಾವಿತ್ರಿ ಅವರು ಕರಪತ್ರಗಳನ್ನು ಅಂಟಿಸಿ, ಸರ್ಕಾರಿ ವಿರೋಧಿ ಘೋಷಣೆ ಕೂಗಿದ್ದರು ಎಂದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ, 2009ರಲ್ಲಿ ಯುಎಪಿಎ ಪ್ರಕರಣ ದಾಖಲಿಸಲಾಗಿತ್ತು.</p>.<p>2005ರಲ್ಲಿ ಲತಾ, ರವೀಂದ್ರ ಮತ್ತು ವನಜಾಕ್ಷಿ ಅವರು ಶೃಂಗೇರಿ ತಾಲ್ಲೂಕಿನ ನೆಮ್ಮಾರಿನಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಗಂಗಾಧರ ಶೆಟ್ಟಿ ಎಂಬುವವರ ಬೈಕ್ ಸುಟ್ಟಿದ್ದರು ಮತ್ತು ಮಾವೋವಾದಿ ಪರ ಘೋಷಣೆ ಕೂಗಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<p>ಮುಂಡಗಾರು ಲತಾ ಮತ್ತು ಇತರರು 2018ರಲ್ಲಿ ಥಣಿಕೋಡು ಅರಣ್ಯ ಚೆಕ್ಪೋಸ್ಟ್ನಲ್ಲಿ ಸ್ಪೋಟಕ ಎಸೆದು ದಾಖಲೆಗಳನ್ನು ಸುಟ್ಟಿದ್ದರು. ₹34,000 ನಷ್ಟ ಉಂಟು ಮಾಡಿದ್ದರು ಎಂದು ಮತ್ತೊಂದು ಯುಎಪಿಎ ಪ್ರಕರಣ ದಾಖಲಿಸಲಾಗಿತ್ತು.</p>.<p>ಬೆಂಗಳೂರಿನ, ಯುಎಪಿಎ ಪ್ರಕರಣ ವಿಶೇಷ ನ್ಯಾಯಾಲಯವು ಈ ಪ್ರಕರಣಗಳ ವಿಚಾರಣೆ ನಡೆಸಿತ್ತು. ‘ಈ ಎಲ್ಲ ಪ್ರಕರಣಗಳಲ್ಲಿ, ಈ ನಾಲ್ವರೇ ಕೃತ್ಯ ಎಸಗಿದ್ದಾರೆ ಎಂಬುದನ್ನು ಸಾಬೀತು ಮಾಡುವಲ್ಲಿ ತನಿಖಾಧಿಕಾರಿಗಳು ವಿಫಲರಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಿರುವ ಪ್ರಕರಣಗಳನ್ನು ವಜಾ ಮಾಡಬಹುದಾಗಿದೆ’ ಎಂದು ನ್ಯಾಯಾಧೀಶ ಸಿ.ಎಂ. ಗಂಗಾಧರ ಅವರು ತೀರ್ಪು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಸರ್ಕಾರಕ್ಕೆ ಈಚೆಗೆ ಶರಣಾಗಿದ್ದ ನಕ್ಸಲ್ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ಅವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳಲ್ಲಿ, ಅವರನ್ನು ಖುಲಾಸೆ ಮಾಡಿ ಬೆಂಗಳೂರಿನ ವಿಶೇಷ ನ್ಯಾಯಾಲಯವು ಗುರುವಾರ ತೀರ್ಪು ನೀಡಿದೆ.</p>.<p>ಶೃಂಗೇರಿಯ ಬುಕ್ಕಡಿಬೈಲು ಬಸ್ ನಿಲ್ದಾಣದ ಅಂಗಡಿಯೊಂದರ ಗೋಡೆ ಮೇಲೆ ಲತಾ, ರವೀಂದ್ರ ಮತ್ತು ಸಾವಿತ್ರಿ ಅವರು ಕರಪತ್ರಗಳನ್ನು ಅಂಟಿಸಿ, ಸರ್ಕಾರಿ ವಿರೋಧಿ ಘೋಷಣೆ ಕೂಗಿದ್ದರು ಎಂದು ಶೃಂಗೇರಿ ಪೊಲೀಸ್ ಠಾಣೆಯಲ್ಲಿ, 2009ರಲ್ಲಿ ಯುಎಪಿಎ ಪ್ರಕರಣ ದಾಖಲಿಸಲಾಗಿತ್ತು.</p>.<p>2005ರಲ್ಲಿ ಲತಾ, ರವೀಂದ್ರ ಮತ್ತು ವನಜಾಕ್ಷಿ ಅವರು ಶೃಂಗೇರಿ ತಾಲ್ಲೂಕಿನ ನೆಮ್ಮಾರಿನಲ್ಲಿ ಲೇವಾದೇವಿ ವ್ಯವಹಾರ ನಡೆಸುತ್ತಿದ್ದ ಗಂಗಾಧರ ಶೆಟ್ಟಿ ಎಂಬುವವರ ಬೈಕ್ ಸುಟ್ಟಿದ್ದರು ಮತ್ತು ಮಾವೋವಾದಿ ಪರ ಘೋಷಣೆ ಕೂಗಿದ್ದರು ಎಂಬ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿತ್ತು.</p>.<p>ಮುಂಡಗಾರು ಲತಾ ಮತ್ತು ಇತರರು 2018ರಲ್ಲಿ ಥಣಿಕೋಡು ಅರಣ್ಯ ಚೆಕ್ಪೋಸ್ಟ್ನಲ್ಲಿ ಸ್ಪೋಟಕ ಎಸೆದು ದಾಖಲೆಗಳನ್ನು ಸುಟ್ಟಿದ್ದರು. ₹34,000 ನಷ್ಟ ಉಂಟು ಮಾಡಿದ್ದರು ಎಂದು ಮತ್ತೊಂದು ಯುಎಪಿಎ ಪ್ರಕರಣ ದಾಖಲಿಸಲಾಗಿತ್ತು.</p>.<p>ಬೆಂಗಳೂರಿನ, ಯುಎಪಿಎ ಪ್ರಕರಣ ವಿಶೇಷ ನ್ಯಾಯಾಲಯವು ಈ ಪ್ರಕರಣಗಳ ವಿಚಾರಣೆ ನಡೆಸಿತ್ತು. ‘ಈ ಎಲ್ಲ ಪ್ರಕರಣಗಳಲ್ಲಿ, ಈ ನಾಲ್ವರೇ ಕೃತ್ಯ ಎಸಗಿದ್ದಾರೆ ಎಂಬುದನ್ನು ಸಾಬೀತು ಮಾಡುವಲ್ಲಿ ತನಿಖಾಧಿಕಾರಿಗಳು ವಿಫಲರಾಗಿದ್ದಾರೆ. ಹೀಗಾಗಿ ಇವರ ವಿರುದ್ಧ ಯುಎಪಿಎ ಮತ್ತು ಭಾರತೀಯ ದಂಡ ಸಂಹಿತೆಯ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಿರುವ ಪ್ರಕರಣಗಳನ್ನು ವಜಾ ಮಾಡಬಹುದಾಗಿದೆ’ ಎಂದು ನ್ಯಾಯಾಧೀಶ ಸಿ.ಎಂ. ಗಂಗಾಧರ ಅವರು ತೀರ್ಪು ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>