<p><strong>ಬೆಂಗಳೂರು:</strong> ಮುಖ್ಯಮಂತ್ರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳಲು ಬಿಜೆಪಿಯ ಉದಯ ಗರುಡಾಚಾರ್ ಮುಂದಾಗುತ್ತಿದ್ದಂತೆ, ಕೈ ಅಡ್ಡ ಇಟ್ಟು ತಡೆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರನ್ನು ಪಕ್ಕಕ್ಕೆ ಎಳೆದ ಪ್ರಸಂಗ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು.</p>.<p>ಶಿವಕುಮಾರ್ ಜೊತೆ ಮಾತನಾಡಲು ಆಡಳಿತ ಪಕ್ಷದ ಸಾಲಿಗೆ ತೆರಳಿದ ಉದಯ್ ಗರುಡಾಚಾರ್, ಶಿವಕುಮಾರ್ ಅವರ ಎಡಭಾಗದಲ್ಲಿನ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಮುಂದಾದರು. ತಕ್ಷಣ ಎಚ್ಚೆತ್ತ ಶಿವಕುಮಾರ್, ಅವರ ಕೈ ಹಿಡಿದು ತಮ್ಮ ಬಲಭಾಗದಲ್ಲಿದ್ದ ಖಾಲಿ ಆಸನದಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದರು.</p>.<p>ತಮ್ಮ ತಪ್ಪು ಅರಿವಿಗೆ ಬರುತ್ತಿದ್ದಂತೆ ತಲೆ ಚಚ್ಚಿಕೊಂಡ ಉದಯ್ ಗರುಡಾಚಾರ್, ವಿರೋಧ ಪಕ್ಷದ ಸದಸ್ಯರ ಕಡೆಗೆ ನೋಡಿ, ಏನೂ ಮಾತನಾಡಬೇಡಿ ಶ್ಶ್...! ಶ್ಶ್...! ಎಂದು ಬಾಯಿ ಮೇಲೆ ಬೆರಳಿಟ್ಟುಕೊಂಡು ಸನ್ಹೆ ಮಾಡಿದರು.</p>.<p>ಆದರೂ ಬಿಜೆಪಿಯ ಸುನಿಲ್ ಕುಮಾರ್, ‘ಯಾರೊ ಕೂರಬೇಕು ಎಂದುಕೊಂಡಿರುವ ಕುರ್ಚಿಯಲ್ಲಿ ಹೋಗಿ ನೀವು ಕೂರುತ್ತಿದ್ದೀರಲ್ಲಾ?’ ಎಂದು ಉದಯ್ ಮತ್ತು ಶಿವಕುಮಾರ್ ಇಬ್ಬರನ್ನೂ ಕಿಚಾಯಿಸಿದರು.</p>.<p>ಬಳಿಕ ವಿರೋಧ ಪಕ್ಷದ ಸಾಲಿನತ್ತ ಬಂದ ಉದಯ್ ಗರುಡಾಚಾರ್ ಅವರಿಗೆ ಬುದ್ದಿವಾದ ಹೇಳಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ನೀವು ಆ ಸಾಲಿಗೆ ಹೋಗಿದ್ದೇ ತಪ್ಪು. ಹೋಗಿ ಆ ರೀತಿ ಮಾಡೋದಾ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಖ್ಯಮಂತ್ರಿಗೆ ಮೀಸಲಾದ ಆಸನದಲ್ಲಿ ಕುಳಿತುಕೊಳ್ಳಲು ಬಿಜೆಪಿಯ ಉದಯ ಗರುಡಾಚಾರ್ ಮುಂದಾಗುತ್ತಿದ್ದಂತೆ, ಕೈ ಅಡ್ಡ ಇಟ್ಟು ತಡೆದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಅವರನ್ನು ಪಕ್ಕಕ್ಕೆ ಎಳೆದ ಪ್ರಸಂಗ ವಿಧಾನಸಭೆಯಲ್ಲಿ ಮಂಗಳವಾರ ನಡೆಯಿತು.</p>.<p>ಶಿವಕುಮಾರ್ ಜೊತೆ ಮಾತನಾಡಲು ಆಡಳಿತ ಪಕ್ಷದ ಸಾಲಿಗೆ ತೆರಳಿದ ಉದಯ್ ಗರುಡಾಚಾರ್, ಶಿವಕುಮಾರ್ ಅವರ ಎಡಭಾಗದಲ್ಲಿನ ಮುಖ್ಯಮಂತ್ರಿ ಕುರ್ಚಿಯಲ್ಲಿ ಕುಳಿತುಕೊಳ್ಳಲು ಮುಂದಾದರು. ತಕ್ಷಣ ಎಚ್ಚೆತ್ತ ಶಿವಕುಮಾರ್, ಅವರ ಕೈ ಹಿಡಿದು ತಮ್ಮ ಬಲಭಾಗದಲ್ಲಿದ್ದ ಖಾಲಿ ಆಸನದಲ್ಲಿ ಕುಳಿತುಕೊಳ್ಳುವಂತೆ ಸೂಚಿಸಿದರು.</p>.<p>ತಮ್ಮ ತಪ್ಪು ಅರಿವಿಗೆ ಬರುತ್ತಿದ್ದಂತೆ ತಲೆ ಚಚ್ಚಿಕೊಂಡ ಉದಯ್ ಗರುಡಾಚಾರ್, ವಿರೋಧ ಪಕ್ಷದ ಸದಸ್ಯರ ಕಡೆಗೆ ನೋಡಿ, ಏನೂ ಮಾತನಾಡಬೇಡಿ ಶ್ಶ್...! ಶ್ಶ್...! ಎಂದು ಬಾಯಿ ಮೇಲೆ ಬೆರಳಿಟ್ಟುಕೊಂಡು ಸನ್ಹೆ ಮಾಡಿದರು.</p>.<p>ಆದರೂ ಬಿಜೆಪಿಯ ಸುನಿಲ್ ಕುಮಾರ್, ‘ಯಾರೊ ಕೂರಬೇಕು ಎಂದುಕೊಂಡಿರುವ ಕುರ್ಚಿಯಲ್ಲಿ ಹೋಗಿ ನೀವು ಕೂರುತ್ತಿದ್ದೀರಲ್ಲಾ?’ ಎಂದು ಉದಯ್ ಮತ್ತು ಶಿವಕುಮಾರ್ ಇಬ್ಬರನ್ನೂ ಕಿಚಾಯಿಸಿದರು.</p>.<p>ಬಳಿಕ ವಿರೋಧ ಪಕ್ಷದ ಸಾಲಿನತ್ತ ಬಂದ ಉದಯ್ ಗರುಡಾಚಾರ್ ಅವರಿಗೆ ಬುದ್ದಿವಾದ ಹೇಳಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ, ‘ನೀವು ಆ ಸಾಲಿಗೆ ಹೋಗಿದ್ದೇ ತಪ್ಪು. ಹೋಗಿ ಆ ರೀತಿ ಮಾಡೋದಾ?’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>