<p><strong>ಉಡುಪಿ: </strong>ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 73 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಹಿಂದಿರುಗಿದ್ದ 61 ಮಂದಿ ಹಾಗೂ ದುಬೈನಿಂದ ಬಂದಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಐವರ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.</p>.<p>ಸೋಂಕಿತರನ್ನು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ಕೋವಿಡ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಗರ್ಭಿಣಿ, ಮಕ್ಕಳು ಹಾಗೂ ವೃದ್ಧರಿಗೆ ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p><strong>ನಾಲ್ವರು ಪೊಲೀಸರು:</strong>ಸೋಂಕಿತರಲ್ಲಿ ಡಿಎಆರ್ ಸಿಬ್ಬಂದಿ ಸೇರಿ ನಾಲ್ವರು ಪೊಲೀಸರು ಇದ್ದು, ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗುವುದು. ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಿ ಹೋಂ ಕ್ವಾರಂಟೈನ್ನಲ್ಲಿರಿಸಲಾಗುವುದು ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.</p>.<p><strong>ಸೋಂಕಿತರ ಸಂಖ್ಯೆ 260ಕ್ಕೇರಿಕೆ:</strong>ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 260ಕ್ಕೇರಿಕೆಯಾಗಿದ್ದು, ಒಬ್ಬರು ಮೃತಪಟ್ಟು, 196 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೂ63 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p><strong>ಮಹಾರಾಷ್ಟ್ರ ನಂಟು:</strong>ಜಿಲ್ಲೆಯಲ್ಲಿ ಪತ್ತೆಯಾಗಿರುವ ಶೇ 80ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳಿಗೆ ಮಹಾರಾಷ್ಟ್ರದ ಸಂಪರ್ಕವಿದೆ. ಇನ್ನೂ 7 ಸಾವಿರಕ್ಕೂ ಹೆಚ್ಚು ವರದಿಗಳು ಪ್ರಯೋಗಾಲಯದಿಂದ ಬರಲು ಬಾಕಿ ಇದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.</p>.<p>ಕೇಂದ್ರ ಸರ್ಕಾರದ ನೂತನ ನಿಯಮಗಳ ಪ್ರಕಾರ, ಹೊರ ರಾಜ್ಯಗಳಿಂದ ಬಂದು 7 ದಿನ ಸಾಂಸ್ಥಿಕ ಕ್ವಾರಂಟೈನ್ ಮುಗಿಸಿದ ಸಾವಿರಾರು ಮಂದಿಯನ್ನು ಹೋಂ ಕ್ವಾರಂಟೈನ್ಗೆ ಮನೆಗೆ ಕಳುಹಿಸಲಾಗಿದೆ. ಪರಿಣಾಮ ಸೋಂಕು ಸಮುದಾಯಕ್ಕೆ ಹರಡುವ ಭೀತಿ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ 73 ಮಂದಿಯಲ್ಲಿ ಕೋವಿಡ್–19 ಸೋಂಕು ದೃಢಪಟ್ಟಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಹಿಂದಿರುಗಿದ್ದ 61 ಮಂದಿ ಹಾಗೂ ದುಬೈನಿಂದ ಬಂದಿದ್ದ ಮೂವರಲ್ಲಿ ಸೋಂಕು ಪತ್ತೆಯಾಗಿದೆ. ಐವರ ಸೋಂಕಿನ ಮೂಲ ಪತ್ತೆಹಚ್ಚಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಮಾಹಿತಿ ನೀಡಿದರು.</p>.<p>ಸೋಂಕಿತರನ್ನು ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ಕೋವಿಡ್ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಗರ್ಭಿಣಿ, ಮಕ್ಕಳು ಹಾಗೂ ವೃದ್ಧರಿಗೆ ಉಡುಪಿಯ ಡಾ.ಟಿಎಂಎ ಪೈ ಕೋವಿಡ್ ಆಸ್ಪತ್ರೆಯಲ್ಲಿ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.</p>.<p><strong>ನಾಲ್ವರು ಪೊಲೀಸರು:</strong>ಸೋಂಕಿತರಲ್ಲಿ ಡಿಎಆರ್ ಸಿಬ್ಬಂದಿ ಸೇರಿ ನಾಲ್ವರು ಪೊಲೀಸರು ಇದ್ದು, ಅವರು ಕರ್ತವ್ಯ ನಿರ್ವಹಿಸುತ್ತಿದ್ದ ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗುವುದು. ಪ್ರಾಥಮಿಕ ಸಂಪರ್ಕಿತರನ್ನು ಪತ್ತೆ ಹಚ್ಚಿ ಹೋಂ ಕ್ವಾರಂಟೈನ್ನಲ್ಲಿರಿಸಲಾಗುವುದು ಎಂದು ಎಸ್ಪಿ ವಿಷ್ಣುವರ್ಧನ್ ತಿಳಿಸಿದರು.</p>.<p><strong>ಸೋಂಕಿತರ ಸಂಖ್ಯೆ 260ಕ್ಕೇರಿಕೆ:</strong>ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 260ಕ್ಕೇರಿಕೆಯಾಗಿದ್ದು, ಒಬ್ಬರು ಮೃತಪಟ್ಟು, 196 ಸಕ್ರಿಯ ಪ್ರಕರಣಗಳು ಇವೆ. ಇದುವರೆಗೂ63 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p><strong>ಮಹಾರಾಷ್ಟ್ರ ನಂಟು:</strong>ಜಿಲ್ಲೆಯಲ್ಲಿ ಪತ್ತೆಯಾಗಿರುವ ಶೇ 80ಕ್ಕೂ ಹೆಚ್ಚು ಸೋಂಕಿತ ಪ್ರಕರಣಗಳಿಗೆ ಮಹಾರಾಷ್ಟ್ರದ ಸಂಪರ್ಕವಿದೆ. ಇನ್ನೂ 7 ಸಾವಿರಕ್ಕೂ ಹೆಚ್ಚು ವರದಿಗಳು ಪ್ರಯೋಗಾಲಯದಿಂದ ಬರಲು ಬಾಕಿ ಇದ್ದು, ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕವಿದೆ.</p>.<p>ಕೇಂದ್ರ ಸರ್ಕಾರದ ನೂತನ ನಿಯಮಗಳ ಪ್ರಕಾರ, ಹೊರ ರಾಜ್ಯಗಳಿಂದ ಬಂದು 7 ದಿನ ಸಾಂಸ್ಥಿಕ ಕ್ವಾರಂಟೈನ್ ಮುಗಿಸಿದ ಸಾವಿರಾರು ಮಂದಿಯನ್ನು ಹೋಂ ಕ್ವಾರಂಟೈನ್ಗೆ ಮನೆಗೆ ಕಳುಹಿಸಲಾಗಿದೆ. ಪರಿಣಾಮ ಸೋಂಕು ಸಮುದಾಯಕ್ಕೆ ಹರಡುವ ಭೀತಿ ಎದುರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>