ಜಿಹಾದಿಗಳ ಸೂಚನೆ ಮೇರೆಗೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಹಿಂದು ಸಹಪಾಠಿಗಳ ವೀಡಿಯೊಗಳನ್ನು ದಾಖಲಿಸಲು ರಹಸವಾಗಿ ಮೊಬೈಲ್ ಕ್ಯಾಮೆರಾ ಇರಿಸಿದ್ದನ್ನು ಪ್ರಶ್ನಿಸಿದ್ದ ಭಾರತೀಯ ಪ್ರಜೆಗಳ ವಿರುದ್ಧ ಪೊಲೀಸ್ ಬಲವನ್ನು ಬಳಸುತ್ತಿದೆ ಎಂದು ಆರೋಪಿಸಿದೆ.
ಇದನ್ನು ಓದಿ: ಶೌಚಾಲಯದಲ್ಲಿ ವಿಡಿಯೊ ಚಿತ್ರೀಕರಣ: 3 ವಿದ್ಯಾರ್ಥಿನಿಯರ ಅಮಾನತು
ಮುಸ್ಲಿಂ ಯುವತಿಯರ ಕೃತ್ಯದ ವಿರುದ್ಧ ಧ್ವನಿ ಎತ್ತಿದ ರಶ್ಮಿ ಅವರ ಮನೆಗೆ ರಾತ್ರಿ ವೇಳೆಯಲ್ಲಿ ಪೊಲೀಸರನ್ನು ಕಳುಹಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ಅವರ ಪಾಲಕರಿಗೆ ಕಿರುಕುಳ ನೀಡುತ್ತಿದೆ. ಜತೆಗೆ ಪೊಲೀಸರು ಅನಗತ್ಯವಾಗಿ ನಿರಂತರ ಕರೆ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಹಾಗಿದ್ದರೆ ಸಂವಿಧಾನಬಾಹಿರ ಸಂಘಟನೆಗಳಿಂದ ರಾಜ್ಯ ಸರ್ಕಾರಕ್ಕೆ ಯಾವುದಾದರೂ ಆದೇಶಗಳಿವೆಯೇ?’ ಎಂದು ಬಿಜೆಪಿ ಪ್ರಶ್ನಿಸಿದೆ.
ಸಿದ್ದರಾಮಯ್ಯ ಸರ್ಕಾರದ ಈ ನಡೆಯನ್ನು ಬಿಜೆಪಿ ಖಂಡಿಸುತ್ತದೆ ಎಂದು ಟ್ವೀಟ್ನಲ್ಲಿ ಬಿಜೆಪಿ ಹೇಳಿದೆ.