<p><strong>ಉಡುಪಿ:</strong> ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದೆ.</p>.<p>ಶುಕ್ರವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ ನಡೆಯಿತು.</p>.<p>ಕೃಷ್ಣವೇಷಧಾರಿಗಳಾಗಿದ್ದ ಮಕ್ಕಳು ವೇದಿಕೆ ಮೇಲೆ ಹೆಜ್ಜೆ ಹಾಕುತ್ತ, ಬೆಣ್ಣೆ ಮೆಲ್ಲುತ್ತ ಕಣ್ಮನ ಸೆಳೆದರು.</p>.<p>ಅಷ್ಟಮಿ ಹಿನ್ನೆಲೆಯಲ್ಲಿಕೃಷ್ಣ ಮಠದಲ್ಲಿ ಅದಮಾರು ಮಠದ ಕಿರಿಯ ಸ್ವಾಮೀಜಿ ಈಶಪ್ರಿಯ ತೀರ್ಥರು ಕೃಷ್ಣ ದೇವರಿಗೆ ಯಶೋಧೆ ಕೃಷ್ಣ ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ವಿದ್ಯಾಧೀಶತೀರ್ಥರು ಮಹಾಪೂಜೆ ನೆರವೇರಿಸಿದರು.</p>.<p>ಮಧ್ಯರಾತ್ರಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುವುದು. ಶನಿವಾರ ವಿಟ್ಲಪಿಂಡಿ ಉತ್ಸವ ನಡೆಯಲಿದೆ.</p>.<p>ರಥಬೀದಿಯಲ್ಲಿ ಶ್ರೀಕೃಷ್ಣನ ಲೀಲೋತ್ಸವಗಳು ನಡೆಯಲಿವೆ. ಚಾತುರ್ಮಾಸ್ಯದ ಕಾರಣ ಕೃಷ್ಣನ ಉತ್ಸವ ಮೂರ್ತಿಯನ್ನು ಗರ್ಭಗುಡಿಯಿಂದ ಹೊರತರುವಂತಿಲ್ಲ. ಹಾಗಾಗಿ, ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಶನಿವಾರ ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.</p>.<p>ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಕೃಷ್ಣನ ದರ್ಶನ ಪಡೆಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕೃಷ್ಣನೂರು ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದೆ.</p>.<p>ಶುಕ್ರವಾರ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ ನಡೆಯಿತು.</p>.<p>ಕೃಷ್ಣವೇಷಧಾರಿಗಳಾಗಿದ್ದ ಮಕ್ಕಳು ವೇದಿಕೆ ಮೇಲೆ ಹೆಜ್ಜೆ ಹಾಕುತ್ತ, ಬೆಣ್ಣೆ ಮೆಲ್ಲುತ್ತ ಕಣ್ಮನ ಸೆಳೆದರು.</p>.<p>ಅಷ್ಟಮಿ ಹಿನ್ನೆಲೆಯಲ್ಲಿಕೃಷ್ಣ ಮಠದಲ್ಲಿ ಅದಮಾರು ಮಠದ ಕಿರಿಯ ಸ್ವಾಮೀಜಿ ಈಶಪ್ರಿಯ ತೀರ್ಥರು ಕೃಷ್ಣ ದೇವರಿಗೆ ಯಶೋಧೆ ಕೃಷ್ಣ ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ವಿದ್ಯಾಧೀಶತೀರ್ಥರು ಮಹಾಪೂಜೆ ನೆರವೇರಿಸಿದರು.</p>.<p>ಮಧ್ಯರಾತ್ರಿ ಶ್ರೀಕೃಷ್ಣನಿಗೆ ಅರ್ಘ್ಯ ಪ್ರದಾನ ಮಾಡಲಾಗುವುದು. ಶನಿವಾರ ವಿಟ್ಲಪಿಂಡಿ ಉತ್ಸವ ನಡೆಯಲಿದೆ.</p>.<p>ರಥಬೀದಿಯಲ್ಲಿ ಶ್ರೀಕೃಷ್ಣನ ಲೀಲೋತ್ಸವಗಳು ನಡೆಯಲಿವೆ. ಚಾತುರ್ಮಾಸ್ಯದ ಕಾರಣ ಕೃಷ್ಣನ ಉತ್ಸವ ಮೂರ್ತಿಯನ್ನು ಗರ್ಭಗುಡಿಯಿಂದ ಹೊರತರುವಂತಿಲ್ಲ. ಹಾಗಾಗಿ, ಕೃಷ್ಣನ ಮೃಣ್ಮಯ (ಮಣ್ಣಿನ) ಮೂರ್ತಿಯನ್ನು ಚಿನ್ನದ ರಥದಲ್ಲಿಟ್ಟು ಶನಿವಾರ ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.</p>.<p>ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಸಾವಿರಾರು ಭಕ್ತರು ಕೃಷ್ಣನ ದರ್ಶನ ಪಡೆಯಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>