‘ಕೇಂದ್ರ ಸರ್ಕಾರವು ತುಘಲಕ್ ದರ್ಬಾರ್ ನಡೆಸುತ್ತಿದೆ. ರಾಜ್ಯ ಸರ್ಕಾರವೂ ಕೇಂದ್ರದ ಹಾದಿ ತುಳಿಯುತ್ತಿದ್ದು, ರೈತ ವಿರೋಧಿ ನಿಲುವನ್ನು ತಾಳುತ್ತಿದೆ. ಪ್ರಧಾನಿಯ ಸರ್ವಾಧಿಕಾರಿ ಧೋರಣೆಯಿಂದ ಗ್ರಾಮೀಣ ಭಾರತ ಸಂಕಷ್ಟಕ್ಕೆ ಸಿಲುಕಿದೆ. ಮೋದಿ ಅವರನ್ನು ಈ ಹಿಂದೆ ಆಧುನಿಕ ದುರ್ಯೋಧನ ಎಂದು ಸಂಬೋಧಿಸಿದ್ದೆ. ಅವರು ಅದೇ ರೀತಿ ನಡೆದುಕೊಳ್ಳುತ್ತಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವು ದೇಶದ ಎರಡನೇ ಸ್ವಾತಂತ್ರ್ಯ ಹೋರಾಟ’ ಎಂದು ತಿಳಿಸಿದರು.