<p><strong>ಬೆಂಗಳೂರು</strong>: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಮುಳುಗಡೆ ಸಂತ್ರಸ್ತರ ಪುನರ್ವಸತಿ ಉದ್ದೇಶಕ್ಕಾಗಿ 1,643 ಎಕರೆ ಕೃಷಿ ಜಮೀನು ಸ್ವಾಧೀನಪಡಿಸಿಕೊಂಡ ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಎತ್ತಿಹಿಡಿದಿದೆ.</p>.<p>ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಗೋಪಾಲ, ರವಿ ಸೇರಿದಂತೆ 25 ಕೃಷಿಕರು ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಪಿ.ಕೃಷ್ಣಭಟ್ ಅವರಿದ್ದ ಧಾರವಾಡದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.</p>.<p>‘ಸರ್ಕಾರವು, ನವನಗರಗಳನ್ನು ನಿರ್ಮಾಣ ಮಾಡುವಾಗ ಮತ್ತು ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಂಡಾಗ ಅದಕ್ಕೆ ಅನೇಕ ಸವಾಲುಗಳಿರುತ್ತವೆ. ಮುಳುಗಡೆ ಪ್ರದೇಶದ ಜನರಿಗೆ ನವನಗರ ಕಟ್ಟಿಕೊಡುವಾಗ ಪ್ರಚಲಿತ ವಿದ್ಯಮಾನಗಳನ್ನು ಗಮನದಲ್ಲಿ ಇರಿಸಿಕೊಂಡೇ ಮುಂದುವರಿಯಬೇಕಾಗುತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<p>‘ಹಿಂದೆ ಇದ್ದ ರೀತಿಯಲ್ಲೇ ಹೊಸ ನಗರಗಳನ್ನೂ ನಿರ್ಮಾಣ ಮಾಡಬೇಕೆಂಬ ಧೋರಣೆ ಸಮರ್ಪಕ ಎನಿಸುವುದಿಲ್ಲ. ಸಾರ್ವಜನಿಕರ ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಶ್ವವಿದ್ಯಾಲಯ, ಕಾಲೇಜು, ದವಾಖಾನೆ ಇತ್ಯಾದಿಗಳ ದೊಡ್ಡ ಪಟ್ಟಿಯೇ ಇರುತ್ತದೆ. ಅವುಗಳನ್ನೆಲ್ಲಾ ಜನರಿಗೆ ಮರು ಕಲ್ಪಿಸಿಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಆದ್ದರಿಂದ, ಈ ಪ್ರಕರಣದಲ್ಲಿ ಮುಚಖಂಡಿ ಮತ್ತು ಬಾಗಲಕೋಟೆ ಗ್ರಾಮ ವ್ಯಾಪ್ತಿಯ 1,643 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡ ಸರ್ಕಾರದ ಕ್ರಮ ನ್ಯಾಯೋಚಿತವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಆಲಮಟ್ಟಿ ಆಣೆಕಟ್ಟು ಎತ್ತರವನ್ನು 523 ರಿಂದ 525 ಮೀಟರ್ಗೆ ಎತ್ತರಿಸುವಂತೆ ನ್ಯಾಯಮಂಡಳಿ ನೀಡಿದ್ದ ತೀರ್ಪಿನ ಅನುಸಾರ ಮುಳುಗಡೆ ಪ್ರದೇಶದ ವಿಸ್ತೀರ್ಣವೂ ಹೆಚ್ಚಾಗಿತ್ತು. ಈ ನಿಟ್ಟಿನಲ್ಲಿ ಬಾಗಲಕೋಟೆಯ ನವನಗರ ನಿರ್ಮಾಣಕ್ಕಾಗಿ ಮತ್ತಷ್ಟು ಕೃಷಿ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಸರ್ಕಾರದ ಈ ಕ್ರಮವನ್ನು ರೈತರು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕೃಷ್ಣಾ ಮೇಲ್ದಂಡೆ ಯೋಜನೆಯ ಮೂರನೇ ಹಂತದ ಮುಳುಗಡೆ ಸಂತ್ರಸ್ತರ ಪುನರ್ವಸತಿ ಉದ್ದೇಶಕ್ಕಾಗಿ 1,643 ಎಕರೆ ಕೃಷಿ ಜಮೀನು ಸ್ವಾಧೀನಪಡಿಸಿಕೊಂಡ ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠ ಎತ್ತಿಹಿಡಿದಿದೆ.</p>.<p>ಈ ಸಂಬಂಧ ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಗೋಪಾಲ, ರವಿ ಸೇರಿದಂತೆ 25 ಕೃಷಿಕರು ಸಲ್ಲಿಸಿದ್ದ ಮೇಲ್ಮನವಿಗಳನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಪಿ.ಕೃಷ್ಣಭಟ್ ಅವರಿದ್ದ ಧಾರವಾಡದ ವಿಭಾಗೀಯ ನ್ಯಾಯಪೀಠ ವಜಾಗೊಳಿಸಿದೆ.</p>.<p>‘ಸರ್ಕಾರವು, ನವನಗರಗಳನ್ನು ನಿರ್ಮಾಣ ಮಾಡುವಾಗ ಮತ್ತು ಸಾರ್ವಜನಿಕ ಉದ್ದೇಶಕ್ಕಾಗಿ ಜಮೀನು ಸ್ವಾಧೀನಪಡಿಸಿಕೊಂಡಾಗ ಅದಕ್ಕೆ ಅನೇಕ ಸವಾಲುಗಳಿರುತ್ತವೆ. ಮುಳುಗಡೆ ಪ್ರದೇಶದ ಜನರಿಗೆ ನವನಗರ ಕಟ್ಟಿಕೊಡುವಾಗ ಪ್ರಚಲಿತ ವಿದ್ಯಮಾನಗಳನ್ನು ಗಮನದಲ್ಲಿ ಇರಿಸಿಕೊಂಡೇ ಮುಂದುವರಿಯಬೇಕಾಗುತ್ತದೆ’ ಎಂದು ನ್ಯಾಯಪೀಠ ಆದೇಶದಲ್ಲಿ ವಿವರಿಸಿದೆ.</p>.<p>‘ಹಿಂದೆ ಇದ್ದ ರೀತಿಯಲ್ಲೇ ಹೊಸ ನಗರಗಳನ್ನೂ ನಿರ್ಮಾಣ ಮಾಡಬೇಕೆಂಬ ಧೋರಣೆ ಸಮರ್ಪಕ ಎನಿಸುವುದಿಲ್ಲ. ಸಾರ್ವಜನಿಕರ ಮೂಲಭೂತ ಅಗತ್ಯಗಳನ್ನು ಪೂರೈಸಲು ವಿಶ್ವವಿದ್ಯಾಲಯ, ಕಾಲೇಜು, ದವಾಖಾನೆ ಇತ್ಯಾದಿಗಳ ದೊಡ್ಡ ಪಟ್ಟಿಯೇ ಇರುತ್ತದೆ. ಅವುಗಳನ್ನೆಲ್ಲಾ ಜನರಿಗೆ ಮರು ಕಲ್ಪಿಸಿಕೊಡುವುದು ಸರ್ಕಾರದ ಆದ್ಯ ಕರ್ತವ್ಯವಾಗಿರುತ್ತದೆ. ಆದ್ದರಿಂದ, ಈ ಪ್ರಕರಣದಲ್ಲಿ ಮುಚಖಂಡಿ ಮತ್ತು ಬಾಗಲಕೋಟೆ ಗ್ರಾಮ ವ್ಯಾಪ್ತಿಯ 1,643 ಎಕರೆ ಪ್ರದೇಶವನ್ನು ಸ್ವಾಧೀನಪಡಿಸಿಕೊಂಡ ಸರ್ಕಾರದ ಕ್ರಮ ನ್ಯಾಯೋಚಿತವಾಗಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.</p>.<p>ಕೃಷ್ಣಾ ಮೇಲ್ದಂಡೆ ಯೋಜನೆಗಾಗಿ ಆಲಮಟ್ಟಿ ಆಣೆಕಟ್ಟು ಎತ್ತರವನ್ನು 523 ರಿಂದ 525 ಮೀಟರ್ಗೆ ಎತ್ತರಿಸುವಂತೆ ನ್ಯಾಯಮಂಡಳಿ ನೀಡಿದ್ದ ತೀರ್ಪಿನ ಅನುಸಾರ ಮುಳುಗಡೆ ಪ್ರದೇಶದ ವಿಸ್ತೀರ್ಣವೂ ಹೆಚ್ಚಾಗಿತ್ತು. ಈ ನಿಟ್ಟಿನಲ್ಲಿ ಬಾಗಲಕೋಟೆಯ ನವನಗರ ನಿರ್ಮಾಣಕ್ಕಾಗಿ ಮತ್ತಷ್ಟು ಕೃಷಿ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಸರ್ಕಾರದ ಈ ಕ್ರಮವನ್ನು ರೈತರು ಪ್ರಶ್ನಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>