<p>ಬೆಳಗಾವಿ (ಸುವರ್ಣ ವಿಧಾನಸೌಧ): ‘ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ- 3ರ ಅನುಷ್ಠಾನಕ್ಕೆ ಹಿಂದೆ ಸ್ವಾಧೀನಪಡಿಸಿಕೊಂಡ ಜಮೀನುಗಳ ರೈತರಿಗೆ ಈವರೆಗೆ ಪರಿಹಾರ ನೀಡಿಲ್ಲ. ಸುಮಾರು 5 ಸಾವಿರ ಪ್ರಕರಣಗಳು ನ್ಯಾಯಾಲಯಗಳ ಮೆಟ್ಟಿಲೇರಿವೆ. ನ್ಯಾಯಾಲಯ ಪರಿಹಾರ ನೀಡುವಂತೆ ಆದೇಶ ಮಾಡಿದ್ದರೂ ನೀಡುತ್ತಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p>.<p>ವಿಧಾನಸಭೆಯಲ್ಲಿ ಯುಕೆಪಿ ವಿಷಯವನ್ನು ಯತ್ನಾಳ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ವಕೀಲರು ಹಾಗೂ ಅಧಿಕಾರಿಗಳು ಒಪ್ಪಂದ ಮಾಡಿಕೊಂಡು ಭೂ ಪರಿಹಾರ ನಿಗದಿ ಮಾಡಿಸಿದ್ದಾರೆ. ₹ 10 ಲಕ್ಷದ ಜಮೀನಿಗೆ ₹ 10 ಕೋಟಿ ಆದೇಶ ಮಾಡಿಸಿದರೆ ಕೊಡಲು ಸಾಧ್ಯವಿಲ್ಲ. ನಾನು ಇದನ್ನು ಒಪ್ಪುವುದಿಲ್ಲ. ನಾವು ರಾಜ್ಯದ ಹಿತ ಕಾಪಾಡಲು ಬದ್ಧ’ ಎಂದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯತ್ನಾಳ, ‘ನ್ಯಾಯಾಲಯದ ಆದೇಶ ಹಾಗೂ ರೈತರಿಗೆ ಅವಮಾನ ಮಾಡಿದ್ದೀರಿ. ಈ ಅವಮಾನ ಖಂಡಿಸಿ ಸಭಾತ್ಯಾಗ ಮಾಡುತ್ತಿದ್ದೇನೆ’ ಎಂದು ಹೇಳಿ ಸಭಾತ್ಯಾಗ ಮಾಡಿದರು.</p>.<p>‘ಯುಕೆಪಿ- 3ರ ಅನುಷ್ಠಾನಕ್ಕೆ 2013ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಬಿಜೆಪಿ ನಾಯಕರು ಒತ್ತಡ ಹೇರಿ ಯೋಜನೆಗೆ ಅನುಮತಿ ಕೊಡಿಸಿದರೆ ಸಾಲ ಮಾಡಿಯಾದರೂ ಯೋಜನೆ ಪೂರ್ಣಗೊಳಿಸಲು ಬದ್ಧವಾಗಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.</p>.<p>‘ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಅವರು ಹಾಗೂ ನಾವು ಚರ್ಚೆ ಮಾಡಿ ಭೂ ಪರಿಹಾರದ ಬಗ್ಗೆ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಎಲ್ಲಿಂದಾದರೂ ಹಣ ತಂದು ವೆಚ್ಚ ಮಾಡಲು ಯೋಜನೆ ರೂಪಿಸಿದ್ದೇವೆ. ವರ್ಷಕ್ಕೆ ಸುಮಾರು ₹ 20 ಸಾವಿರ ಕೋಟಿ ಬೇಕು. ಮುಂದಿನ ಮೂರ್ನಾಲ್ಕು ವರ್ಷದಲ್ಲಿ ಭೂಸ್ವಾಧೀನ ಪೂರ್ಣಗೊಳಿಸಬೇಕು ಎಂದು ಹೊರಟಿದ್ದೇವೆ. ಕೆಲವು ಕಡೆ ಕೆಲಸವನ್ನೂ ಆರಂಭಿಸಿದ್ದೇವೆ’ ಎಂದು ಹೇಳಿದರು.</p>.<p>ಈವರೆಗೆ ₹ 50,452 ಕೋಟಿ ವೆಚ್ಚ: ‘ಈ ಯೋಜನೆಗೆ 188 ಗ್ರಾಮಗಳ 75,563 ಎಕರೆ ಜಮೀನು ಮುಳುಗಡೆಯಾಗುತ್ತದೆ. ಈ ಪೈಕಿ 2,543 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ವಿತರಿಸಲಾಗಿರುತ್ತದೆ. ನವೆಂಬರ್ವರೆಗೆ ಭೂಸ್ವಾಧೀನ ಹಾಗೂ ಪುನರ್ ನಿರ್ಮಾಣ ವೆಚ್ಚ ಸೇರಿದಂತೆ ₹ 50,452 ಕೋಟಿ ವೆಚ್ಚ ಭರಿಸಲಾಗಿದೆ’ ಎಂದು ಶಿವಕುಮಾರ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ (ಸುವರ್ಣ ವಿಧಾನಸೌಧ): ‘ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) ಹಂತ- 3ರ ಅನುಷ್ಠಾನಕ್ಕೆ ಹಿಂದೆ ಸ್ವಾಧೀನಪಡಿಸಿಕೊಂಡ ಜಮೀನುಗಳ ರೈತರಿಗೆ ಈವರೆಗೆ ಪರಿಹಾರ ನೀಡಿಲ್ಲ. ಸುಮಾರು 5 ಸಾವಿರ ಪ್ರಕರಣಗಳು ನ್ಯಾಯಾಲಯಗಳ ಮೆಟ್ಟಿಲೇರಿವೆ. ನ್ಯಾಯಾಲಯ ಪರಿಹಾರ ನೀಡುವಂತೆ ಆದೇಶ ಮಾಡಿದ್ದರೂ ನೀಡುತ್ತಿಲ್ಲ’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದರು.</p>.<p>ವಿಧಾನಸಭೆಯಲ್ಲಿ ಯುಕೆಪಿ ವಿಷಯವನ್ನು ಯತ್ನಾಳ ಪ್ರಸ್ತಾಪಿಸಿದಾಗ ಪ್ರತಿಕ್ರಿಯಿಸಿದ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ವಕೀಲರು ಹಾಗೂ ಅಧಿಕಾರಿಗಳು ಒಪ್ಪಂದ ಮಾಡಿಕೊಂಡು ಭೂ ಪರಿಹಾರ ನಿಗದಿ ಮಾಡಿಸಿದ್ದಾರೆ. ₹ 10 ಲಕ್ಷದ ಜಮೀನಿಗೆ ₹ 10 ಕೋಟಿ ಆದೇಶ ಮಾಡಿಸಿದರೆ ಕೊಡಲು ಸಾಧ್ಯವಿಲ್ಲ. ನಾನು ಇದನ್ನು ಒಪ್ಪುವುದಿಲ್ಲ. ನಾವು ರಾಜ್ಯದ ಹಿತ ಕಾಪಾಡಲು ಬದ್ಧ’ ಎಂದರು.</p>.<p>ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯತ್ನಾಳ, ‘ನ್ಯಾಯಾಲಯದ ಆದೇಶ ಹಾಗೂ ರೈತರಿಗೆ ಅವಮಾನ ಮಾಡಿದ್ದೀರಿ. ಈ ಅವಮಾನ ಖಂಡಿಸಿ ಸಭಾತ್ಯಾಗ ಮಾಡುತ್ತಿದ್ದೇನೆ’ ಎಂದು ಹೇಳಿ ಸಭಾತ್ಯಾಗ ಮಾಡಿದರು.</p>.<p>‘ಯುಕೆಪಿ- 3ರ ಅನುಷ್ಠಾನಕ್ಕೆ 2013ರಿಂದ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸದೆ ಬಾಕಿ ಉಳಿಸಿಕೊಂಡಿದೆ. ಬಿಜೆಪಿ ನಾಯಕರು ಒತ್ತಡ ಹೇರಿ ಯೋಜನೆಗೆ ಅನುಮತಿ ಕೊಡಿಸಿದರೆ ಸಾಲ ಮಾಡಿಯಾದರೂ ಯೋಜನೆ ಪೂರ್ಣಗೊಳಿಸಲು ಬದ್ಧವಾಗಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.</p>.<p>‘ಕೃಷ್ಣಾ ಮೇಲ್ದಂಡೆ ಯೋಜನೆ ವಿಚಾರವಾಗಿ ಸಿದ್ದರಾಮಯ್ಯ ಅವರು ಹಾಗೂ ನಾವು ಚರ್ಚೆ ಮಾಡಿ ಭೂ ಪರಿಹಾರದ ಬಗ್ಗೆ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ. ಎಲ್ಲಿಂದಾದರೂ ಹಣ ತಂದು ವೆಚ್ಚ ಮಾಡಲು ಯೋಜನೆ ರೂಪಿಸಿದ್ದೇವೆ. ವರ್ಷಕ್ಕೆ ಸುಮಾರು ₹ 20 ಸಾವಿರ ಕೋಟಿ ಬೇಕು. ಮುಂದಿನ ಮೂರ್ನಾಲ್ಕು ವರ್ಷದಲ್ಲಿ ಭೂಸ್ವಾಧೀನ ಪೂರ್ಣಗೊಳಿಸಬೇಕು ಎಂದು ಹೊರಟಿದ್ದೇವೆ. ಕೆಲವು ಕಡೆ ಕೆಲಸವನ್ನೂ ಆರಂಭಿಸಿದ್ದೇವೆ’ ಎಂದು ಹೇಳಿದರು.</p>.<p>ಈವರೆಗೆ ₹ 50,452 ಕೋಟಿ ವೆಚ್ಚ: ‘ಈ ಯೋಜನೆಗೆ 188 ಗ್ರಾಮಗಳ 75,563 ಎಕರೆ ಜಮೀನು ಮುಳುಗಡೆಯಾಗುತ್ತದೆ. ಈ ಪೈಕಿ 2,543 ಎಕರೆ ಜಮೀನನ್ನು ಸ್ವಾಧೀನಪಡಿಸಿಕೊಂಡು ಪರಿಹಾರ ವಿತರಿಸಲಾಗಿರುತ್ತದೆ. ನವೆಂಬರ್ವರೆಗೆ ಭೂಸ್ವಾಧೀನ ಹಾಗೂ ಪುನರ್ ನಿರ್ಮಾಣ ವೆಚ್ಚ ಸೇರಿದಂತೆ ₹ 50,452 ಕೋಟಿ ವೆಚ್ಚ ಭರಿಸಲಾಗಿದೆ’ ಎಂದು ಶಿವಕುಮಾರ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>