‘ಸಂಸತ್ತಿನಲ್ಲಿ ಭದ್ರತಾ ಲೋಪ ಏಕೆ ಸಂಭವಿಸಿತು ಎಂದು ಅವಲೋಕಿಸಿದರೆ, ದೇಶದ ಇಂದಿನ ಪ್ರಮುಖ ಸಮಸ್ಯೆಯೇ ನಿರುದ್ಯೋಗ. ಹಣದುಬ್ಬರ ಮತ್ತು ನಿರುದ್ಯೋಗದಿಂದ ಹತಾಶರಾಗಿರುವ ಯುವಕರು ಈ ಕೆಲಸ ಮಾಡಿದ್ದಾರೆ’ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಭದ್ರತಾ ಲೋಪದ ಬಗ್ಗೆ ಇದೇ ಮೊದಲ ಬಾರಿಗೆ ಹೇಳಿಕೆ ನೀಡಿರುವ ಅವರು, ‘ಪ್ರಧಾನ ಮಂತ್ರಿಯವರ ನೀತಿಯಿಂದ ದೇಶದಲ್ಲಿ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ’ ಎಂದು ಆರೋಪಿಸಿದ್ದಾರೆ.