‘ಆಹಾರ ಭದ್ರತಾ ಕಾಯ್ದೆಯಡಿ ಕೇಂದ್ರ ಸರ್ಕಾರ 5 ಕೆ.ಜಿ ಅಕ್ಕಿಯನ್ನು ದೇಶದ ಎಲ್ಲರಿಗೆ ನೀಡುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 10 ಕೆ.ಜಿ ಅಕ್ಕಿ ನೀಡುವ ಗ್ಯಾರಂಟಿ ನೀಡಿದೆ. ಇದನ್ನು ರಾಜ್ಯ ತನ್ನದೇ ಮೂಲದಿಂದ ಹೆಚ್ಚುವರಿಯಾಗಿ ನೀಡಬೇಕು. ಭಾರತ ಆಹಾರ ನಿಗಮದ (ಎಫ್ಸಿಐ) ಮೇಲೆ ಆರೋಪ ಮಾಡುವುದು ಸರಿಯಲ್ಲ’ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
‘ಅಕ್ಕಿ ಉತ್ಪಾದನೆ, ಸಂಗ್ರಹ ಆಧರಿಸಿ ಭವಿಷ್ಯದ ಬಗ್ಗೆ ತೀರ್ಮಾನ ಕೈಗೊಳ್ಳುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಪ್ರಧಾನಿ, ಎಫ್ಸಿಐ ಹಾಗೂ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ನಾಯಕರು ಸ್ವತಂತ್ರರು. ಕುರ್ಚಿ ಕಿತ್ತಾಟವನ್ನು ಬದಿಗಿಟ್ಟು ಗ್ಯಾರಂಟಿ ಈಡೇರಿಸುವ ಬಗ್ಗೆ ಚರ್ಚಿಸಿ. ಕೇಂದ್ರ, ಪಂಜಾಬ್, ಛತೀಸ್ಗಡ ಸರ್ಕಾರದ ನೆಪ ಹೇಳುವ ಬದಲು ಕೊಟ್ಟ ಮಾತಿನಂತೆ ಅಕ್ಕಿ ವಿತರಿಸಿ’ ಎಂದರು.