<p><strong>ಬೆಂಗಳೂರು: </strong>ದೆಹಲಿಯಲ್ಲಿ ದಟ್ವವಾಗಿ ಮಂಜು ಆವರಿಸಿದ್ದ ಕಾರಣ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸಬೇಕಿದ್ದ ವಾಯುಪಡೆ ವಿಮಾನ ಟೇಕ್ ಆಫ್ ವಿಳಂಬವಾಗಿದೆ.</p>.<p>ಬೆಳಿಗ್ಗೆ 9 ಗಂಟೆ ಬದಲು 11.40ಕ್ಕೆ ವಿಮಾನ ಟೇಕ್ ಆಫ್ ಆಗಿದೆ. ಹೀಗಾಗಿ ಅಮಿತ್ ಶಾ ಬೆಂಗಳೂರು ತಲುಪುವುದು ಎರಡೂವರೆ ಗಂಟೆ ತಡವಾಗಲಿದ್ದು, ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.10ಕ್ಕೆ ತಲುಪಲಿದೆ.</p>.<p>ವಿಮಾನ ವಿಳಂಬ ಆಗಿರುವ ಕಾರಣ ವಿಕ್ಟೋರಿಯಾ ಆಸ್ಪತ್ರೆ ಕಾರ್ಯಕ್ರಮ ಮುಗಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಗೆ ಮರಳಿದ್ದಾರೆ.</p>.<p>ವಿಕ್ಟೋರಿಯಾ ಆಸ್ಪತ್ರೆಯಿಂದ ನೇರವಾಗಿ ಎಚ್ಎಎಲ್ಗೆ ತೆರಳಿ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸ್ವಾಗತಿಸಬೇಕಿತ್ತು.</p>.<p>ಅಮಿತ್ ಶಾ ವಿಳಂಬವಾಗಿ ಬರುವ ಕಾರಣ ಭದ್ರಾವತಿಯಲ್ಲಿ ನಡೆಯಲಿರುವ ರ್ಯಾಪಿಡ್ ಆಕ್ಷನ್ ಫೋರ್ಸ್ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ಕಾರ್ಯಕ್ರಮ ಮತ್ತು ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮ ಮತ್ತು ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಬಿಜೆಪಿ ಪ್ರಮುಖರ ಸಭೆ ಕೂಡ ನಿಗದಿತ ಸಮಯಕ್ಕಿಂತ ವಿಳಂಬವಾಗಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದೆಹಲಿಯಲ್ಲಿ ದಟ್ವವಾಗಿ ಮಂಜು ಆವರಿಸಿದ್ದ ಕಾರಣ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಣಿಸಬೇಕಿದ್ದ ವಾಯುಪಡೆ ವಿಮಾನ ಟೇಕ್ ಆಫ್ ವಿಳಂಬವಾಗಿದೆ.</p>.<p>ಬೆಳಿಗ್ಗೆ 9 ಗಂಟೆ ಬದಲು 11.40ಕ್ಕೆ ವಿಮಾನ ಟೇಕ್ ಆಫ್ ಆಗಿದೆ. ಹೀಗಾಗಿ ಅಮಿತ್ ಶಾ ಬೆಂಗಳೂರು ತಲುಪುವುದು ಎರಡೂವರೆ ಗಂಟೆ ತಡವಾಗಲಿದ್ದು, ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 2.10ಕ್ಕೆ ತಲುಪಲಿದೆ.</p>.<p>ವಿಮಾನ ವಿಳಂಬ ಆಗಿರುವ ಕಾರಣ ವಿಕ್ಟೋರಿಯಾ ಆಸ್ಪತ್ರೆ ಕಾರ್ಯಕ್ರಮ ಮುಗಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಅಧಿಕೃತ ನಿವಾಸ ಕಾವೇರಿಗೆ ಮರಳಿದ್ದಾರೆ.</p>.<p>ವಿಕ್ಟೋರಿಯಾ ಆಸ್ಪತ್ರೆಯಿಂದ ನೇರವಾಗಿ ಎಚ್ಎಎಲ್ಗೆ ತೆರಳಿ ಅಮಿತ್ ಶಾ ಅವರನ್ನು ಮುಖ್ಯಮಂತ್ರಿ ಸ್ವಾಗತಿಸಬೇಕಿತ್ತು.</p>.<p>ಅಮಿತ್ ಶಾ ವಿಳಂಬವಾಗಿ ಬರುವ ಕಾರಣ ಭದ್ರಾವತಿಯಲ್ಲಿ ನಡೆಯಲಿರುವ ರ್ಯಾಪಿಡ್ ಆಕ್ಷನ್ ಫೋರ್ಸ್ ಘಟಕ ಸ್ಥಾಪನೆಗೆ ಶಂಕುಸ್ಥಾಪನೆ ಕಾರ್ಯಕ್ರಮ ಮತ್ತು ವಿಧಾನಸೌಧದಲ್ಲಿ ನಡೆಯಲಿರುವ ಕಾರ್ಯಕ್ರಮ ಮತ್ತು ಖಾಸಗಿ ಹೋಟೆಲ್ನಲ್ಲಿ ನಡೆಯಲಿರುವ ಬಿಜೆಪಿ ಪ್ರಮುಖರ ಸಭೆ ಕೂಡ ನಿಗದಿತ ಸಮಯಕ್ಕಿಂತ ವಿಳಂಬವಾಗಿ ನಡೆಯಲಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>