<p><strong>ಬೆಂಗಳೂರು:</strong> ‘ಬಿಎಚ್ಇಎಲ್ಗೆ ದೊಡ್ಡ ಪ್ರಮಾಣದಲ್ಲಿ ಬೇಡಿಕೆಗಳು ಇವೆ. ಆದರೆ ಸಂಸ್ಥೆಯ ಲಾಭದ ಪ್ರಮಾಣ ತೃಪ್ತಿದಾಯಕವಾಗಿಲ್ಲ. ನಿರ್ವಹಣೆಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಸಂಸ್ಥೆ ನಷ್ಟದ ಸುಳಿಗೆ ಸಿಲುಕುವ ಅಪಾಯವಿದೆ’ ಎಂದು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ನಗರದ ಮೈಸೂರು ರಸ್ತೆಯಲ್ಲಿರುವ ಬಿಎಚ್ಇಎಲ್ನ ವಿದ್ಯುನ್ಮಾನ ಘಟಕಕ್ಕೆ ಮಂಗಳವಾರ ಭೇಟಿ ನೀಡಿದ್ದ ಸಚಿವರು, ಅಧಿಕಾರಿಗಳು ಮತ್ತು ನೌಕರರ ಜತೆ ಮಾತುಕತೆ ನಡೆಸಿದರು. ಈ ವೇಳೆ, ‘ಕೈಗಾರಿಕಾ ಕ್ಷೇತ್ರಕ್ಕೆ ಬೆಂಗಳೂರಿನ ಕೊಡುಗೆ ಅಪಾರ. ದೇಶದ ಅತ್ಯುತ್ತಮ ಕೈಗಾರಿಕೆಗಳು ಇಲ್ಲಿಯೇ ಇದ್ದವು. ಎಚ್ಎಂಟಿ, ಐಟಿಐಗಳು ನಷ್ಟಕ್ಕೆ ಸಿಲುಕಿವೆ. ಅಂತಹ ಸ್ಥಿತಿ ಬಿಎಚ್ಇಎಲ್ಗೆ ಬರಬಾರದು’ ಎಂದರು.</p>.<p>‘ಸಂಸ್ಥೆಯು ಉತ್ತಮವಾಗಿ ಕೆಲಸ ಮಾಡುತ್ತಿದೆ. ಹಾಗೆಂದು ನೂತನ ಆವಿಷ್ಕಾರ ಮತ್ತು ತಂತ್ರಜ್ಞಾನ ಅಳವಡಿಕೆಯಲ್ಲಿ ಹಿಂದುಳಿಯಬಾರದು. ಈ ಬಗ್ಗೆ ಅಧಿಕಾರಿಗಳು ಮತ್ತು ನೌಕರ ವರ್ಗ ಎಚ್ಚರಿಕೆಯಿಂದ ಇರಬೇಕು. ಸಂಸ್ಥೆ ನಷ್ಟಕ್ಕೆ ಸಿಲುಕದಂತೆ ತಡೆಯುವ ಹೊಣೆಗಾರಿಕೆ ಅಧಿಕಾರಿ ಮತ್ತು ನೌಕರರ ಮೇಲೆ ಇದೆ’ ಎಂದರು.</p>.<p>ಸಚಿವರು ಘಟಕದ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯನಿರ್ವಹಣೆಯ ಮಾಹಿತಿ ಪಡೆದುಕೊಂಡರು. ನೌಕರರ ಜತೆಗೆ ಸಂವಾದ ನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಿದರು. ಅವುಗಳನ್ನು ಬಗೆಹರಿಸುವ ಬಗ್ಗೆ ಭರವಸೆ ನೀಡಿದರು. ಉತ್ತಮ ಕೆಲಸ ಮಾಡಿದ ನೌಕರರನ್ನು ಸನ್ಮಾನಿಸಲಾಯಿತು.</p>.<div><blockquote>ಧಾನಿ ನರೇಂದ್ರ ಮೋದಿ ಅವರ ‘ಭಾರತದಲ್ಲೇ ತಯಾರಿಸಿ’ ಮತ್ತು ‘ಆತ್ಮನಿರ್ಭರ ಭಾರತ’ ಪರಿಕಲ್ಪನೆಗಳ ಅಡಿಯಲ್ಲಿ ಬಿಎಚ್ಇಎಲ್ ಅನ್ನು ಸಶಕ್ತಗೊಳಿಸಲಾಗುವುದು</blockquote><span class="attribution">ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಭಾರಿ ಕೈಗಾರಿಕಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಿಎಚ್ಇಎಲ್ಗೆ ದೊಡ್ಡ ಪ್ರಮಾಣದಲ್ಲಿ ಬೇಡಿಕೆಗಳು ಇವೆ. ಆದರೆ ಸಂಸ್ಥೆಯ ಲಾಭದ ಪ್ರಮಾಣ ತೃಪ್ತಿದಾಯಕವಾಗಿಲ್ಲ. ನಿರ್ವಹಣೆಯಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಸಂಸ್ಥೆ ನಷ್ಟದ ಸುಳಿಗೆ ಸಿಲುಕುವ ಅಪಾಯವಿದೆ’ ಎಂದು ಕೇಂದ್ರ ಭಾರಿ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.</p>.<p>ನಗರದ ಮೈಸೂರು ರಸ್ತೆಯಲ್ಲಿರುವ ಬಿಎಚ್ಇಎಲ್ನ ವಿದ್ಯುನ್ಮಾನ ಘಟಕಕ್ಕೆ ಮಂಗಳವಾರ ಭೇಟಿ ನೀಡಿದ್ದ ಸಚಿವರು, ಅಧಿಕಾರಿಗಳು ಮತ್ತು ನೌಕರರ ಜತೆ ಮಾತುಕತೆ ನಡೆಸಿದರು. ಈ ವೇಳೆ, ‘ಕೈಗಾರಿಕಾ ಕ್ಷೇತ್ರಕ್ಕೆ ಬೆಂಗಳೂರಿನ ಕೊಡುಗೆ ಅಪಾರ. ದೇಶದ ಅತ್ಯುತ್ತಮ ಕೈಗಾರಿಕೆಗಳು ಇಲ್ಲಿಯೇ ಇದ್ದವು. ಎಚ್ಎಂಟಿ, ಐಟಿಐಗಳು ನಷ್ಟಕ್ಕೆ ಸಿಲುಕಿವೆ. ಅಂತಹ ಸ್ಥಿತಿ ಬಿಎಚ್ಇಎಲ್ಗೆ ಬರಬಾರದು’ ಎಂದರು.</p>.<p>‘ಸಂಸ್ಥೆಯು ಉತ್ತಮವಾಗಿ ಕೆಲಸ ಮಾಡುತ್ತಿದೆ. ಹಾಗೆಂದು ನೂತನ ಆವಿಷ್ಕಾರ ಮತ್ತು ತಂತ್ರಜ್ಞಾನ ಅಳವಡಿಕೆಯಲ್ಲಿ ಹಿಂದುಳಿಯಬಾರದು. ಈ ಬಗ್ಗೆ ಅಧಿಕಾರಿಗಳು ಮತ್ತು ನೌಕರ ವರ್ಗ ಎಚ್ಚರಿಕೆಯಿಂದ ಇರಬೇಕು. ಸಂಸ್ಥೆ ನಷ್ಟಕ್ಕೆ ಸಿಲುಕದಂತೆ ತಡೆಯುವ ಹೊಣೆಗಾರಿಕೆ ಅಧಿಕಾರಿ ಮತ್ತು ನೌಕರರ ಮೇಲೆ ಇದೆ’ ಎಂದರು.</p>.<p>ಸಚಿವರು ಘಟಕದ ಎಲ್ಲಾ ವಿಭಾಗಗಳಿಗೆ ಭೇಟಿ ನೀಡಿ, ಅಲ್ಲಿನ ಕಾರ್ಯನಿರ್ವಹಣೆಯ ಮಾಹಿತಿ ಪಡೆದುಕೊಂಡರು. ನೌಕರರ ಜತೆಗೆ ಸಂವಾದ ನಡೆಸಿ, ಅವರ ಕುಂದುಕೊರತೆಗಳನ್ನು ಆಲಿಸಿದರು. ಅವುಗಳನ್ನು ಬಗೆಹರಿಸುವ ಬಗ್ಗೆ ಭರವಸೆ ನೀಡಿದರು. ಉತ್ತಮ ಕೆಲಸ ಮಾಡಿದ ನೌಕರರನ್ನು ಸನ್ಮಾನಿಸಲಾಯಿತು.</p>.<div><blockquote>ಧಾನಿ ನರೇಂದ್ರ ಮೋದಿ ಅವರ ‘ಭಾರತದಲ್ಲೇ ತಯಾರಿಸಿ’ ಮತ್ತು ‘ಆತ್ಮನಿರ್ಭರ ಭಾರತ’ ಪರಿಕಲ್ಪನೆಗಳ ಅಡಿಯಲ್ಲಿ ಬಿಎಚ್ಇಎಲ್ ಅನ್ನು ಸಶಕ್ತಗೊಳಿಸಲಾಗುವುದು</blockquote><span class="attribution">ಎಚ್.ಡಿ.ಕುಮಾರಸ್ವಾಮಿ, ಕೇಂದ್ರ ಭಾರಿ ಕೈಗಾರಿಕಾ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>