<p><strong>ಬೆಂಗಳೂರು</strong>: ಫಲವತ್ತತೆ ಕಳೆದುಕೊಂಡು ಬಂಜರಾಗಿರುವ ಜಮೀನುಗಳ ಪುನರುಜ್ಜೀವನಕ್ಕೆ ವಿಜ್ಞಾನವನ್ನು ರೈತರು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಸಲಹೆ ನೀಡಿದರು.</p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ನಡೆದ ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರಮಟ್ಟದ ರಿವಾರ್ಡ್ ಯೋಜನೆ, ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜಗತ್ತಿನ ಒಟ್ಟು ಜನಸಂಖ್ಯೆಯಲ್ಲಿ ಶೇಕಡ 18ರಷ್ಟು ಜನರು ಭಾರತದಲ್ಲಿದ್ದಾರೆ. ಇಲ್ಲಿನ ಜನರಿಗೆ ತಲಾ 0.14 ಹೆಕ್ಟೇರ್ ಜಮೀನು ಮಾತ್ರ ಇದೆ. ಆದರೆ, ಎಲ್ಲ ಜಮೀನು ಫಲವತ್ತಾಗಿ ಉಳಿದಿಲ್ಲ. ಬಂಜರಾಗಿರುವ ಜಮೀನುಗಳನ್ನು ಪುನರುಜ್ಜೀವನಗೊಳಿಸಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ದಿಕ್ಕಿನಲ್ಲಿ ಪ್ರಯತ್ನ ಮಾಡಬೇಕು ಎಂದರು.</p>.<p>2050ರ ವೇಳೆಗೆ ವಿಶ್ವದಲ್ಲಿ ಆಹಾರ ಧಾನ್ಯಗಳ ಕೊರತೆ ಎದುರಾಗಲಿದೆ. ಮನುಷ್ಯರಿಗಾಗಿ ಮಾತ್ರವಲ್ಲ ಕೋಳಿ, ಮೀನು ಸಾಕಣೆಗೆ ಆಹಾರ ಉತ್ಪಾದಿಸುವುದಕ್ಕೂ ಧಾನ್ಯಗಳು ಬೇಕು. ಈ ಬೇಡಿಕೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಯೋಚಿಸಿ, ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.</p>.<p>ಬಂಜರು ಜಮೀನುಗಳ ಪುನರುಜ್ಜೀವನ ಕುರಿತು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ವಿಶ್ವ ಬ್ಯಾಂಕ್ ನೆರವಿನಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕದ ರೈತರು ಪರಿಣಾಮಕಾರಿಯಾಗಿ ಈ ಯೋಜನೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, 'ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಗುರಿ. ಅದನ್ನು ಸಾಧಿಸಲು ರೈತರು ತಮ್ಮ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಕಂಡುಕೊಳ್ಳಬೇಕು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಮುಂದಾಗಬೇಕು' ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಒಡಿಶಾ ಕೃಷಿ ಸಚಿವ ಅರುಣ್ ಸಾಹು, ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟೀಲ, ತೋಟಗಾರಿಕೆ ಸಚಿವ ಮುನಿರತ್ನ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇದ್ದರು.</p>.<p><a href="https://www.prajavani.net/karnataka-news/jds-leader-hd-kumaraswamy-slams-basavaraj-bommai-bjp-govt-regarding-appointment-scams-mentioned-935013.html" itemprop="url">ಸರ್ಕಾರಿ ಹುದ್ದೆಗಳ ‘ಕಾಸ್’ಗೀಕರಣ: ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಚಾಟಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಫಲವತ್ತತೆ ಕಳೆದುಕೊಂಡು ಬಂಜರಾಗಿರುವ ಜಮೀನುಗಳ ಪುನರುಜ್ಜೀವನಕ್ಕೆ ವಿಜ್ಞಾನವನ್ನು ರೈತರು ಪರಿಣಾಮಕಾರಿಯಾಗಿ ಬಳಸಬೇಕು ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಗಿರಿರಾಜ್ ಸಿಂಗ್ ಸಲಹೆ ನೀಡಿದರು.</p>.<p>ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಭಾನುವಾರ ನಡೆದ ವಿಶ್ವ ಬ್ಯಾಂಕ್ ನೆರವಿನ ರಾಷ್ಟ್ರಮಟ್ಟದ ರಿವಾರ್ಡ್ ಯೋಜನೆ, ಜಲಾನಯನ ಉತ್ಕೃಷ್ಟತಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>ಜಗತ್ತಿನ ಒಟ್ಟು ಜನಸಂಖ್ಯೆಯಲ್ಲಿ ಶೇಕಡ 18ರಷ್ಟು ಜನರು ಭಾರತದಲ್ಲಿದ್ದಾರೆ. ಇಲ್ಲಿನ ಜನರಿಗೆ ತಲಾ 0.14 ಹೆಕ್ಟೇರ್ ಜಮೀನು ಮಾತ್ರ ಇದೆ. ಆದರೆ, ಎಲ್ಲ ಜಮೀನು ಫಲವತ್ತಾಗಿ ಉಳಿದಿಲ್ಲ. ಬಂಜರಾಗಿರುವ ಜಮೀನುಗಳನ್ನು ಪುನರುಜ್ಜೀವನಗೊಳಿಸಿ ತೋಟಗಾರಿಕಾ ಬೆಳೆಗಳನ್ನು ಬೆಳೆಯುವ ದಿಕ್ಕಿನಲ್ಲಿ ಪ್ರಯತ್ನ ಮಾಡಬೇಕು ಎಂದರು.</p>.<p>2050ರ ವೇಳೆಗೆ ವಿಶ್ವದಲ್ಲಿ ಆಹಾರ ಧಾನ್ಯಗಳ ಕೊರತೆ ಎದುರಾಗಲಿದೆ. ಮನುಷ್ಯರಿಗಾಗಿ ಮಾತ್ರವಲ್ಲ ಕೋಳಿ, ಮೀನು ಸಾಕಣೆಗೆ ಆಹಾರ ಉತ್ಪಾದಿಸುವುದಕ್ಕೂ ಧಾನ್ಯಗಳು ಬೇಕು. ಈ ಬೇಡಿಕೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಯೋಚಿಸಿ, ಕಾರ್ಯಪ್ರವೃತ್ತರಾಗಬೇಕು ಎಂದು ಹೇಳಿದರು.</p>.<p>ಬಂಜರು ಜಮೀನುಗಳ ಪುನರುಜ್ಜೀವನ ಕುರಿತು ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ರೂಪಿಸುತ್ತಿದೆ. ವಿಶ್ವ ಬ್ಯಾಂಕ್ ನೆರವಿನಲ್ಲಿ ಜಲಾನಯನ ಅಭಿವೃದ್ಧಿ ಯೋಜನೆ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕದ ರೈತರು ಪರಿಣಾಮಕಾರಿಯಾಗಿ ಈ ಯೋಜನೆ ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, 'ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಗುರಿ. ಅದನ್ನು ಸಾಧಿಸಲು ರೈತರು ತಮ್ಮ ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಕಂಡುಕೊಳ್ಳಬೇಕು. ಕೃಷಿ ಉತ್ಪನ್ನಗಳ ಮೌಲ್ಯವರ್ಧನೆಗೆ ಮುಂದಾಗಬೇಕು' ಎಂದರು.</p>.<p>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಒಡಿಶಾ ಕೃಷಿ ಸಚಿವ ಅರುಣ್ ಸಾಹು, ರಾಜ್ಯದ ಕೃಷಿ ಸಚಿವ ಬಿ.ಸಿ. ಪಾಟೀಲ, ತೋಟಗಾರಿಕೆ ಸಚಿವ ಮುನಿರತ್ನ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಇದ್ದರು.</p>.<p><a href="https://www.prajavani.net/karnataka-news/jds-leader-hd-kumaraswamy-slams-basavaraj-bommai-bjp-govt-regarding-appointment-scams-mentioned-935013.html" itemprop="url">ಸರ್ಕಾರಿ ಹುದ್ದೆಗಳ ‘ಕಾಸ್’ಗೀಕರಣ: ಸರ್ಕಾರಕ್ಕೆ ಎಚ್.ಡಿ. ಕುಮಾರಸ್ವಾಮಿ ಚಾಟಿ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>