<p><strong>ಬೆಂಗಳೂರು</strong>: ಬ್ರಿಟನ್ನ ಪ್ರತಿಷ್ಠಿತ ಸೂಪರ್ ಮಾರ್ಕೆಟ್ ಕಂಪನಿ ಟೆಸ್ಕೊ, ಬೆಂಗಳೂರಿನಲ್ಲಿ ವಹಿವಾಟು ವಿಸ್ತರಣೆ ಮತ್ತು ಹೊಸಕೋಟೆಯಲ್ಲಿ ದೊಡ್ಡ ವಿತರಣಾ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಿದೆ. 18,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.</p>.<p>ಜಾಗತಿಕ ಹೂಡಿಕೆ ಸಮಾವೇಶ ಪೂರ್ವಸಿದ್ಧತೆಯ ಭಾಗವಾಗಿ ಬ್ರಿಟನ್ ಪ್ರವಾಸದಲ್ಲಿರುವ ಅವರು, ಅಲ್ಲಿನ ಉದ್ಯಮಿಗಳ ಜತೆಗೆ ನಡೆದ ಮಾತುಕತೆಯ ನಂತರ ಈ ಮಾಹಿತಿ ನೀಡಿದ್ದಾರೆ.</p>.<p>‘ಟೆಸ್ಕೊ ಕಂಪನಿ ಬೆಂಗಳೂರಿನಲ್ಲಿ ಈಗಾಗಲೇ ಸಣ್ಣ ಘಟಕ ಹೊಂದಿದೆ. ಅದನ್ನು ವಿಸ್ತರಿಸಲು ಮುಂದಾಗಿದ್ದು, ಬೆಂಗಳೂರಿನಲ್ಲೇ 1,500 ನೇಮಕಾತಿ ನಡೆಯಲಿದೆ. ಹೊಸಕೋಟೆಯ ವಿತರಣಾ ಕೇಂದ್ರದಲ್ಲಿ 16,500 ಉದ್ಯೋಗ ಸೃಷ್ಟಿಯಾಗಲಿವೆ’ ಎಂದಿದ್ದಾರೆ.</p>.<p>ವೈಮಾನಿಕ ಸಂಸ್ಥೆಗಳೊಂದಿಗೆ ಮಾತುಕತೆ: ಈ ಭೇಟಿಯ ವೇಳೆ ಸಚಿವ ಎಂ.ಬಿ.ಪಾಟೀಲ ಅವರು ರೋಲ್ಸ್ ರಾಯ್ಸ್, ಮೆಗೆಲ್ಲನ್ ಏರೋಸ್ಪೇಸ್ ಕಂಪನಿಗಳ ಪ್ರತಿನಿಧಿಗಳ ಜತೆಗೆ ಚರ್ಚಿಸಿದರು. </p>.<p>ಕರ್ನಾಟಕದಲ್ಲಿ ವೈಮಾಂತರಿಕ್ಷ ಕ್ಷೇತ್ರದಲ್ಲಿ ಹೂಡಿಕೆ ಅವಕಾಶಗಳು ಮತ್ತು ಅನುಕೂಲಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಪಿಯರ್ಸನ್ ಕಂಪನಿಯ ಅಧಿಕಾರಿಗಳಿಗೆ ವಿವರಿಸಿದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಬ್ರಿಟನ್ನ ಪ್ರತಿಷ್ಠಿತ ಸೂಪರ್ ಮಾರ್ಕೆಟ್ ಕಂಪನಿ ಟೆಸ್ಕೊ, ಬೆಂಗಳೂರಿನಲ್ಲಿ ವಹಿವಾಟು ವಿಸ್ತರಣೆ ಮತ್ತು ಹೊಸಕೋಟೆಯಲ್ಲಿ ದೊಡ್ಡ ವಿತರಣಾ ಕೇಂದ್ರ ಸ್ಥಾಪನೆಗೆ ಸಿದ್ಧತೆ ನಡೆಸಿದೆ. 18,000ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು ತಿಳಿಸಿದ್ದಾರೆ.</p>.<p>ಜಾಗತಿಕ ಹೂಡಿಕೆ ಸಮಾವೇಶ ಪೂರ್ವಸಿದ್ಧತೆಯ ಭಾಗವಾಗಿ ಬ್ರಿಟನ್ ಪ್ರವಾಸದಲ್ಲಿರುವ ಅವರು, ಅಲ್ಲಿನ ಉದ್ಯಮಿಗಳ ಜತೆಗೆ ನಡೆದ ಮಾತುಕತೆಯ ನಂತರ ಈ ಮಾಹಿತಿ ನೀಡಿದ್ದಾರೆ.</p>.<p>‘ಟೆಸ್ಕೊ ಕಂಪನಿ ಬೆಂಗಳೂರಿನಲ್ಲಿ ಈಗಾಗಲೇ ಸಣ್ಣ ಘಟಕ ಹೊಂದಿದೆ. ಅದನ್ನು ವಿಸ್ತರಿಸಲು ಮುಂದಾಗಿದ್ದು, ಬೆಂಗಳೂರಿನಲ್ಲೇ 1,500 ನೇಮಕಾತಿ ನಡೆಯಲಿದೆ. ಹೊಸಕೋಟೆಯ ವಿತರಣಾ ಕೇಂದ್ರದಲ್ಲಿ 16,500 ಉದ್ಯೋಗ ಸೃಷ್ಟಿಯಾಗಲಿವೆ’ ಎಂದಿದ್ದಾರೆ.</p>.<p>ವೈಮಾನಿಕ ಸಂಸ್ಥೆಗಳೊಂದಿಗೆ ಮಾತುಕತೆ: ಈ ಭೇಟಿಯ ವೇಳೆ ಸಚಿವ ಎಂ.ಬಿ.ಪಾಟೀಲ ಅವರು ರೋಲ್ಸ್ ರಾಯ್ಸ್, ಮೆಗೆಲ್ಲನ್ ಏರೋಸ್ಪೇಸ್ ಕಂಪನಿಗಳ ಪ್ರತಿನಿಧಿಗಳ ಜತೆಗೆ ಚರ್ಚಿಸಿದರು. </p>.<p>ಕರ್ನಾಟಕದಲ್ಲಿ ವೈಮಾಂತರಿಕ್ಷ ಕ್ಷೇತ್ರದಲ್ಲಿ ಹೂಡಿಕೆ ಅವಕಾಶಗಳು ಮತ್ತು ಅನುಕೂಲಗಳು ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಹೂಡಿಕೆ ಅವಕಾಶಗಳ ಬಗ್ಗೆ ಪಿಯರ್ಸನ್ ಕಂಪನಿಯ ಅಧಿಕಾರಿಗಳಿಗೆ ವಿವರಿಸಿದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>