<p><strong>ಬೆಂಗಳೂರು:</strong> ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ವಿಶ್ವವಿದ್ಯಾಲಯಗಳಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ವಿಶ್ವವಿದ್ಯಾಲಯಗಳ ಪ್ರಸ್ತುತ ಆರ್ಥಿಕ ಸ್ಥಿತಿಗತಿ, ಬ್ಯಾಂಕ್ ಖಾತೆಯಲ್ಲಿನ ಮಾಹಿತಿ, ಠೇವಣಿ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದೆ.</p>.<p>ವೇತನ, ಅಭಿವೃದ್ಧಿ ಕಾರ್ಯ, ನಿವೃತ್ತ ನೌಕರರಿಗೆ ಪಿಂಚಣಿ ನೀಡಲು ಸಹ ಹಲವು ವಿಶ್ವವಿದ್ಯಾಲಯಗಳಲ್ಲಿ ಹಣವಿಲ್ಲ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ನಡೆಸಿದ ಅಧ್ಯಯನ ವರದಿ ಪ್ರಕಾರ ಕನಿಷ್ಠ 13 ವಿಶ್ವವಿದ್ಯಾಲಯಗಳ ಸಿಬ್ಬಂದಿಯ ನಿವೃತ್ತಿ ಪಿಂಚಣಿ ಬಾಕಿಯೇ ₹562 ಕೋಟಿ ಇದೆ. ಬೆಂಗಳೂರು, ಧಾರವಾಡ ಸೇರಿದಂತೆ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ನೆರವು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿವೆ.</p>.<p>ಕೆಲ ವಿಶ್ವವಿದ್ಯಾಲಯಗಳು ಅನುಮೋದನೆಗಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದು, ಹೊರಗುತ್ತಿಗೆ, ಒಪ್ಪಂದದ ಆಧಾರದ ಮೇಲೆ ನೇಮಿಸಿರುವ ಸಿಬ್ಬಂದಿಯನ್ನು ವಜಾ ಮಾಡಬೇಕು. ಆಡಳಿತ ವೆಚ್ಚವನ್ನು ನಿಯಂತ್ರಿಸಬೇಕು. ಈ ಕುರಿತು ವರದಿ ಸಲ್ಲಿಸಬೇಕು ಎಂದೂ ಉನ್ನತ ಶಿಕ್ಷಣ ಇಲಾಖೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ವಿಶ್ವವಿದ್ಯಾಲಯಗಳಿಗೆ ನೆರವು ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ವಿಶ್ವವಿದ್ಯಾಲಯಗಳ ಪ್ರಸ್ತುತ ಆರ್ಥಿಕ ಸ್ಥಿತಿಗತಿ, ಬ್ಯಾಂಕ್ ಖಾತೆಯಲ್ಲಿನ ಮಾಹಿತಿ, ಠೇವಣಿ ವಿವರಗಳನ್ನು ಸಲ್ಲಿಸುವಂತೆ ಸೂಚಿಸಿದೆ.</p>.<p>ವೇತನ, ಅಭಿವೃದ್ಧಿ ಕಾರ್ಯ, ನಿವೃತ್ತ ನೌಕರರಿಗೆ ಪಿಂಚಣಿ ನೀಡಲು ಸಹ ಹಲವು ವಿಶ್ವವಿದ್ಯಾಲಯಗಳಲ್ಲಿ ಹಣವಿಲ್ಲ. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ನಡೆಸಿದ ಅಧ್ಯಯನ ವರದಿ ಪ್ರಕಾರ ಕನಿಷ್ಠ 13 ವಿಶ್ವವಿದ್ಯಾಲಯಗಳ ಸಿಬ್ಬಂದಿಯ ನಿವೃತ್ತಿ ಪಿಂಚಣಿ ಬಾಕಿಯೇ ₹562 ಕೋಟಿ ಇದೆ. ಬೆಂಗಳೂರು, ಧಾರವಾಡ ಸೇರಿದಂತೆ ಹಲವು ವಿಶ್ವವಿದ್ಯಾಲಯಗಳು ಆರ್ಥಿಕ ನೆರವು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿವೆ.</p>.<p>ಕೆಲ ವಿಶ್ವವಿದ್ಯಾಲಯಗಳು ಅನುಮೋದನೆಗಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಂಡಿದ್ದು, ಹೊರಗುತ್ತಿಗೆ, ಒಪ್ಪಂದದ ಆಧಾರದ ಮೇಲೆ ನೇಮಿಸಿರುವ ಸಿಬ್ಬಂದಿಯನ್ನು ವಜಾ ಮಾಡಬೇಕು. ಆಡಳಿತ ವೆಚ್ಚವನ್ನು ನಿಯಂತ್ರಿಸಬೇಕು. ಈ ಕುರಿತು ವರದಿ ಸಲ್ಲಿಸಬೇಕು ಎಂದೂ ಉನ್ನತ ಶಿಕ್ಷಣ ಇಲಾಖೆ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>