ಕಂಪ್ಲಿ–ಗಂಗಾವತಿ ಸೇತುವೆ 1960ರಲ್ಲಿ ನಿರ್ಮಾಣಗೊಂಡಿದೆ. ಆದರೆ, ಆರಂಭಿಕ ವರ್ಷಗಳಲ್ಲಿ ಅದರಿಂದ ಸಮಸ್ಯೆಯಾಗಿರಲಿಲ್ಲ. ಆದರೆ, 1992ರಲ್ಲಿ 3.69 ಲಕ್ಷ ಕ್ಯುಸೆಕ್ ನೀರು ನದಿಗೆ ಹರಿಸಿದಾಗ ಪರಿಣಾಮ ಉಂಟಾಗಿತ್ತು. ಸೇತುವೆ 12 ಮೀಟರ್ ಎತ್ತರ ಹಾಗೂ ಅವೈಜ್ಞಾನಿಕವಾಗಿ ನಿರ್ಮಿಸಿದ್ದರಿಂದ ಸಹಜ ಹರಿವಿಗೆ ತಡೆಯೊಡ್ಡಿತ್ತು. 2017ರಲ್ಲಿ ಬುಕ್ಕಸಾಗರ–ಕಡೇಬಾಗಿಲು ನಡುವೆ 487.5 ಮೀಟರ್ ಉದ್ದದ ಹೊಸ ಸೇತುವೆ ನಿರ್ಮಿಸಲಾಗಿದೆ. ಇದರ ಎತ್ತರ 500 ಮೀಟರ್ ಇದೆ. ಇದು ಕೂಡ ಅವೈಜ್ಞಾನಿಕವಾಗಿ ನಿರ್ಮಿಸಿದ್ದು, ನೀರು ಸಹಜವಾಗಿ ಹರಿದು ಹೋಗಲು ಸಮಸ್ಯೆಯಾಗುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.