<p><strong>ನವದೆಹಲಿ</strong>: ವಿರಳ ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯವು 2025–26ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹300 ಕೋಟಿಯಲ್ಲಿ ₹30 ಕೋಟಿಯಷ್ಟೇ ಬಳಕೆ ಯಾಗಿದೆ. </p><p>ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಔಷಧ ಲಭ್ಯವಿದ್ದರೂ ರೋಗಿಗಳಿಗೆ ಸಿಗುತ್ತಿಲ್ಲ. ಡಿಸೆಂಬರ್ ಅಂತ್ಯದ ವೇಳೆಗೆ, ಶೇ 80ರಷ್ಟು ಅನುದಾನ ಬಳಕೆಯೇ ಆಗಿಲ್ಲ ಎಂದು ಆರೋಗ್ಯ ಸಚಿವಾಲಯವೇ ಒಪ್ಪಿಕೊಂಡಿದೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲಾಗಿದೆ. ಮಾರ್ಚ್ 31ಕ್ಕೆ ಆರ್ಥಿಕ ವರ್ಷ ಮುಗಿಯಲಿದ್ದು, ಅದರೊಳಗೆ ಅನುದಾನ ಬಳಕೆ ಮಾಡದಿದ್ದರೆ ವ್ಯರ್ಥ ಆಗಲಿದೆ. </p><p>ದೇಶದಲ್ಲಿ ಸುಮಾರು ಏಳು ಸಾವಿರ ವಿರಳ ಕಾಯಿಲೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶೇ 5ರಷ್ಟು ಕಾಯಿಲೆಗಳಿಗೆ ಮಾತ್ರ ನಿಖರ ಚಿಕಿತ್ಸೆಗಳಿದ್ದು, ಉಳಿದ ಶೇ 95ರಷ್ಟು ಕಾಯಿಲೆಗಳಿಗೆ ಜೀವನಪೂರ್ತಿ ಪೂರಕ ಚಿಕಿತ್ಸೆ ಒದಗಿಸಬೇಕಾಗಿದೆ.</p><p>ಹಿಮೋಫೀಲಿಯಾ, ತಲಸ್ಸೇಮಿಯಾ, ಪೊಂಪೆ, ಗೌಚರ್, ಸಿಕಲ್–ಸೆಲ್ ಅನೀಮಿಯಾ ಸೇರಿ ಹಲವು ರೋಗಗಳನ್ನು ವಿರಳ ಕಾಯಿಲೆಗಳ ಪಟ್ಟಿಗೆ ಸೇರಿಸಲಾಗಿದೆ. ಈ ಕಾಯಿಲೆಗಳು ಆನುವಂಶಿಕವಾಗಿವೆ. </p><p>ಈ ರೋಗಗಳಿಂದ ಬಳಲುತ್ತಿರುವವರಿಗೆ ನೆರವಾಗಲು ಆರೋಗ್ಯ ಸಚಿವಾಲಯವು ‘ವಿರಳ ರೋಗಗಳ ರಾಷ್ಟ್ರೀಯ ನೀತಿ–2021’ರ (ತಿದ್ದುಪಡಿ) ಅಡಿ ತಲಾ ₹50 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಔಷಧ ಒದಗಿಸುತ್ತಿದೆ. ಆದರೆ, ಬಹುತೇಕ ಎಲ್ಲ ರೋಗಿಗಳ ಚಿಕಿತ್ಸಾ ವೆಚ್ಚವು ಅಲ್ಪಾವಧಿಯಲ್ಲಿಯೇ ಗೊತ್ತುಪಡಿಸಿದ ಮೊತ್ತವನ್ನು ಮೀರುತ್ತಿದೆ. ಇದರಿಂದಾಗಿ ರೋಗಿಗಳ ಕುಟುಂಬಗಳು ಚಿಕಿತ್ಸಾ ವೆಚ್ಚ ಭರಿಸ ಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. </p>.<p><strong>ಅಂಕಿ ಅಂಶಗಳು </strong></p><p>₹300 ಕೋಟಿ</p><p>2025–26ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ಮೊತ್ತ</p><p>₹30.79 ಕೋಟಿ </p><p>ಡಿಸೆಂಬರ್ ಅಂತ್ಯದ ವರೆಗೆ ಖರ್ಚು ಮಾಡಿರುವ ಮೊತ್ತ </p><p>103 ಮಂದಿ</p><p>₹50 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಇಲ್ಲಿಯವರೆಗೆ ಪಡೆದವರು</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ವಿರಳ ಕಾಯಿಲೆಯಿಂದ ಬಳಲುತ್ತಿರುವವರಿಗೆ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯವು 2025–26ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ₹300 ಕೋಟಿಯಲ್ಲಿ ₹30 ಕೋಟಿಯಷ್ಟೇ ಬಳಕೆ ಯಾಗಿದೆ. </p><p>ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಔಷಧ ಲಭ್ಯವಿದ್ದರೂ ರೋಗಿಗಳಿಗೆ ಸಿಗುತ್ತಿಲ್ಲ. ಡಿಸೆಂಬರ್ ಅಂತ್ಯದ ವೇಳೆಗೆ, ಶೇ 80ರಷ್ಟು ಅನುದಾನ ಬಳಕೆಯೇ ಆಗಿಲ್ಲ ಎಂದು ಆರೋಗ್ಯ ಸಚಿವಾಲಯವೇ ಒಪ್ಪಿಕೊಂಡಿದೆ. ಈ ಬಗ್ಗೆ ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ಪಡೆಯಲಾಗಿದೆ. ಮಾರ್ಚ್ 31ಕ್ಕೆ ಆರ್ಥಿಕ ವರ್ಷ ಮುಗಿಯಲಿದ್ದು, ಅದರೊಳಗೆ ಅನುದಾನ ಬಳಕೆ ಮಾಡದಿದ್ದರೆ ವ್ಯರ್ಥ ಆಗಲಿದೆ. </p><p>ದೇಶದಲ್ಲಿ ಸುಮಾರು ಏಳು ಸಾವಿರ ವಿರಳ ಕಾಯಿಲೆಗಳನ್ನು ಗುರುತಿಸಲಾಗಿದೆ. ಇವುಗಳಲ್ಲಿ ಶೇ 5ರಷ್ಟು ಕಾಯಿಲೆಗಳಿಗೆ ಮಾತ್ರ ನಿಖರ ಚಿಕಿತ್ಸೆಗಳಿದ್ದು, ಉಳಿದ ಶೇ 95ರಷ್ಟು ಕಾಯಿಲೆಗಳಿಗೆ ಜೀವನಪೂರ್ತಿ ಪೂರಕ ಚಿಕಿತ್ಸೆ ಒದಗಿಸಬೇಕಾಗಿದೆ.</p><p>ಹಿಮೋಫೀಲಿಯಾ, ತಲಸ್ಸೇಮಿಯಾ, ಪೊಂಪೆ, ಗೌಚರ್, ಸಿಕಲ್–ಸೆಲ್ ಅನೀಮಿಯಾ ಸೇರಿ ಹಲವು ರೋಗಗಳನ್ನು ವಿರಳ ಕಾಯಿಲೆಗಳ ಪಟ್ಟಿಗೆ ಸೇರಿಸಲಾಗಿದೆ. ಈ ಕಾಯಿಲೆಗಳು ಆನುವಂಶಿಕವಾಗಿವೆ. </p><p>ಈ ರೋಗಗಳಿಂದ ಬಳಲುತ್ತಿರುವವರಿಗೆ ನೆರವಾಗಲು ಆರೋಗ್ಯ ಸಚಿವಾಲಯವು ‘ವಿರಳ ರೋಗಗಳ ರಾಷ್ಟ್ರೀಯ ನೀತಿ–2021’ರ (ತಿದ್ದುಪಡಿ) ಅಡಿ ತಲಾ ₹50 ಲಕ್ಷದವರೆಗೆ ಉಚಿತ ಚಿಕಿತ್ಸೆ ಹಾಗೂ ಔಷಧ ಒದಗಿಸುತ್ತಿದೆ. ಆದರೆ, ಬಹುತೇಕ ಎಲ್ಲ ರೋಗಿಗಳ ಚಿಕಿತ್ಸಾ ವೆಚ್ಚವು ಅಲ್ಪಾವಧಿಯಲ್ಲಿಯೇ ಗೊತ್ತುಪಡಿಸಿದ ಮೊತ್ತವನ್ನು ಮೀರುತ್ತಿದೆ. ಇದರಿಂದಾಗಿ ರೋಗಿಗಳ ಕುಟುಂಬಗಳು ಚಿಕಿತ್ಸಾ ವೆಚ್ಚ ಭರಿಸ ಲಾಗದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕುತ್ತಿವೆ. </p>.<p><strong>ಅಂಕಿ ಅಂಶಗಳು </strong></p><p>₹300 ಕೋಟಿ</p><p>2025–26ನೇ ಸಾಲಿನಲ್ಲಿ ಮೀಸಲಿಟ್ಟಿದ್ದ ಮೊತ್ತ</p><p>₹30.79 ಕೋಟಿ </p><p>ಡಿಸೆಂಬರ್ ಅಂತ್ಯದ ವರೆಗೆ ಖರ್ಚು ಮಾಡಿರುವ ಮೊತ್ತ </p><p>103 ಮಂದಿ</p><p>₹50 ಲಕ್ಷದವರೆಗೆ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಇಲ್ಲಿಯವರೆಗೆ ಪಡೆದವರು</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>