‘ಎರಡನೇ ನ್ಯಾಯಾಧೀಕರಣವು 2013ರಲ್ಲಿ ನಮಗೆ 130 ಟಿಎಂಸಿ ಅಡಿ ನೀರು ಬಳಸಿಕೊಳ್ಳಲು ಅನುಮತಿ ನೀಡಿತ್ತು. ಆದರೆ, ಬಳಸಿಕೊಳ್ಳಲು ಆಗಿಲ್ಲ. ಸದ್ಯ ನಾಲ್ಕೂ ರಾಜ್ಯಗಳಿಂದ ಸುಪ್ರೀಂಕೋರ್ಟ್ನಲ್ಲಿ ದಾವೆಗಳಿವೆ. ಮೇಲಾಗಿ, ಯೋಜನೆ ಅನುಷ್ಠಾನಕ್ಕಾಗಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಬೇಕು ಎಂದು ಕರ್ನಾಟಕ ಹಾಗೂ ಮಹಾರಾಷ್ಟ್ರ ಸರ್ಕಾರಗಳಿಂದ ಜಂಟಿಯಾಗಿ ಕೇಂದ್ರ ಸರ್ಕಾರ ಮತ್ತು ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಎರಡೂ ರಾಜ್ಯಗಳ ವಾದ ಒಂದೇ ಆಗಿದ್ದರಿಂದ ಶೀಘ್ರ ನೀರು ಬಳಕೆ ಸಾಧ್ಯವಾಗಲಿದೆ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.