ಬೆಂಗಳೂರು: ‘ಕಷ್ಟಕರವಾದ ಯಾವುದೇ ಮೂರು ಲೋಕಸಭಾ ಕ್ಷೇತ್ರಗಳ ಉಸ್ತುವಾರಿ ಕೊಟ್ಟರೂ ಸರಿ, ಅವುಗಳನ್ನು ಗೆಲ್ಲಿಸಿಕೊಂಡು ಬರುತ್ತೇನೆ ಎಂದು ವರಿಷ್ಠರಿಗೆ ಹೇಳಿದ್ದೇನೆ’ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಸೋಮವಾರ ಅವರು ಸುದ್ದಿಗಾರರ ಜತೆ ಮಾತನಾಡಿ, ‘ವರಿಷ್ಠರನ್ನು ಶನಿವಾರ ಭೇಟಿ ಮಾಡಿದಾಗ ರಾಜ್ಯಸಭೆಗೆ ಟಿಕೆಟ್ ಕೇಳುವುದರ ಜತೆಗೆ ಮೂರು ಲೋಕಸಭಾ ಕ್ಷೇತ್ರಗಳ ಗೆಲ್ಲಿಸಿಕೊಂಡು ಬರುವ ಜವಾಬ್ದಾರಿಯನ್ನೂ ಕೇಳಿದ್ದೇನೆ’ ಎಂದರು.