ಮಂಗಳವಾರ ಸುದ್ದಿಗಾರರ ಜತೆ ಮತನಾಡಿದ ಅವರು, ಬೆಂಗಳೂರು ನಗರದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಆಧುನಿಕ ತಂತ್ರಜ್ಞಾನ ಬಳಸಿ ಚಿರತೆ ಸೆರೆ ಹಿಡಿಯಲು ಇಲಾಖೆ ಸರ್ವ ಪ್ರಯತ್ನ ಮಾಡುತ್ತಿದೆ. ಡ್ರೋನ್ ಕ್ಯಾಮೆರಾಗಳ ನೆರವಿನಿಂದಲೂ ಶೋಧ ಕಾರ್ಯ ನಡೆಸುತ್ತಿದೆ. ಈಗಾಗಲೇ ಚಿರತೆ ಓಡಾಡಿರುವ ಸ್ಥಳದಲ್ಲಿ ಬೋನುಗಳನ್ನು ಇಡಲಾಗಿದೆ. ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ ಎಂದರು.