‘ರಾಜ್ಯ ಸಾಹಿತ್ಯ ಅಕಾಡೆಮಿ, ಮಾಧ್ಯಮ ಅಕಾಡೆಮಿ, ನಾಟಕ ಅಕಾಡೆಮಿ ಪ್ರಶಸ್ತಿಗಳು ಬಂದಾಗಲೂ ಹಣ ಸ್ವೀಕರಿಸದೇ, ಆ ಹಣವನ್ನು ಸಮಾಜದ ಒಳ್ಳೆಯ ಕೆಲಸಗಳಿಗೆ ವಿನಿಯೋಗಿಸಲು ಹೇಳಿದ್ದೆ. ಆದರೆ, ಈವರೆಗೂ ಯಾವುದೇ ಅಕಾಡೆಮಿಗಳು ಆ ರೀತಿ ಮಾಡಲಿಲ್ಲ. ಹಾಗಾಗಿ ಈ ಬಾರಿ ಹಿತೈಷಿಗಳು ಪ್ರಶಸ್ತಿ ಮೊತ್ತವನ್ನು ಸ್ವೀಕರಿಸಿ, ಅದನ್ನು ನಾನೇ ಸಮಾಜ ಕಲ್ಯಾಣಕ್ಕೆ ವಿನಿಯೋಗಿಸಬೇಕೆಂದು ಸಲಹೆ ನೀಡಿದ್ದಾರೆ. ಈ ಬಾರಿಯ ಪ್ರಶಸ್ತಿ ಮೊತ್ತವನ್ನು ನಾನು ಹೆಚ್ಚಾಗಿ ಗುರುತಿಸಿಕೊಂಡಿರುವ ಕಾರ್ಮಿಕ ವಲಯದ ಯಾವುದಾದರೂ ಕಾರ್ಮಿಕ ಕಲ್ಯಾಣ ಸಂಘಟನೆಯ ಚಟುವಟಿಕೆಗೆ ವಿನಿಯೋಗಿಸುತ್ತೇನೆ’ ಎಂದು ಹೇಳಿದ್ದಾರೆ.