ಬೆಳಗಾವಿ: ಡಿಸೆಂಬರ್ ನಲ್ಲಿ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ವಿಧಾನಸಭೆ ಸಭಾಂಗಣ, ಬ್ಯಾಕ್ವೆಂಟ್ ಹಾಲ್, ಸೆಂಟ್ರಲ್ ಹಾಲ್, ಸೌಧದಲ್ಲಿರುವ ವಿವಿಧ ಕೊಠಡಿಗಳನ್ನು ಉಭಯ ನಾಯಕರು ಪರಿಶೀಲಿಸಿದರು.
'ಸೌಧದ ನಿರ್ವಹಣೆಗೆ ಪ್ರತಿವರ್ಷ ಕೋಟ್ಯಂತರ ರೂಪಾಯಿ ವ್ಯಯಿಸಲಾಗುತ್ತಿದೆ. ಆದರೂ,
ಸೌಧದಲ್ಲಿ ಸ್ವಚ್ಛತೆಯನ್ನು ಏಕೆ ಕಾಪಾಡಿಲ್ಲ' ಎಂದು ಖಾದರ್ ಅವರು, ಲೋಕೋಪಯೋಗಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.