<p><strong>ಕಾರವಾರ:</strong> ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 20 ಮಂದಿಯನ್ನು ಶನಿವಾರ ಬಿಡುಗಡೆ ಮಾಡಲಾಯಿತು.</p>.<p>ಸಂಸ್ಥೆಯ ಹೊರಭಾಗದಲ್ಲಿ ಹಮ್ಮಿಕೊಂಡ ಸರಳ ಸಮಾರಂಭದಲ್ಲಿ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಚಪ್ಪಾಳೆ ತಟ್ಟಿ, ಸಿಹಿ ನೀಡಿದರು. ಜೊತೆಗೇ ಸೋಂಕುಮುಕ್ತರಾದ ಬಗ್ಗೆ ಪ್ರಮಾಮಪತ್ರ ನೀಡಿದರು.</p>.<p>ಗುಣಮುಖರಾದವರ ಪೈಕಿ 83 ವರ್ಷದ ಹಿರಿಯರು ಹಾಗೂ ಒಂದು ವರ್ಷದ ಹೆಣ್ಣು ಮಗು ಸೇರಿದ್ದಾರೆ. ಎಲ್ಲರೂ ಭಟ್ಕಳದವರಾಗಿದ್ದು, ಕಳೆದ 16 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ ಸೌಲಭ್ಯಗಳು ಅತ್ಯುತ್ತಮ ರೀತಿಯಲ್ಲಿದ್ದು, ಬಹಳ ಸೂಕ್ತವಾಗಿ ನೋಡಿಕೊಂಡರು ಎಂದು ಗುಣಮುಖರಾದವರು ಸಂತಸ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಜಿಲ್ಲಾ ಪಂಚಾಯ್ತಿ ಸಿ.ಇ.ಒ ಮೊಹಮ್ಮದ್ ರೋಶನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕಕುಮಾರ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತಲಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾರವಾರ:</strong> ಇಲ್ಲಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕೋವಿಡ್ ವಾರ್ಡ್ನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾದ 20 ಮಂದಿಯನ್ನು ಶನಿವಾರ ಬಿಡುಗಡೆ ಮಾಡಲಾಯಿತು.</p>.<p>ಸಂಸ್ಥೆಯ ಹೊರಭಾಗದಲ್ಲಿ ಹಮ್ಮಿಕೊಂಡ ಸರಳ ಸಮಾರಂಭದಲ್ಲಿ ವೈದ್ಯಾಧಿಕಾರಿಗಳು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಚಪ್ಪಾಳೆ ತಟ್ಟಿ, ಸಿಹಿ ನೀಡಿದರು. ಜೊತೆಗೇ ಸೋಂಕುಮುಕ್ತರಾದ ಬಗ್ಗೆ ಪ್ರಮಾಮಪತ್ರ ನೀಡಿದರು.</p>.<p>ಗುಣಮುಖರಾದವರ ಪೈಕಿ 83 ವರ್ಷದ ಹಿರಿಯರು ಹಾಗೂ ಒಂದು ವರ್ಷದ ಹೆಣ್ಣು ಮಗು ಸೇರಿದ್ದಾರೆ. ಎಲ್ಲರೂ ಭಟ್ಕಳದವರಾಗಿದ್ದು, ಕಳೆದ 16 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.ಆಸ್ಪತ್ರೆಯಲ್ಲಿ ಚಿಕಿತ್ಸೆ ಹಾಗೂ ಸೌಲಭ್ಯಗಳು ಅತ್ಯುತ್ತಮ ರೀತಿಯಲ್ಲಿದ್ದು, ಬಹಳ ಸೂಕ್ತವಾಗಿ ನೋಡಿಕೊಂಡರು ಎಂದು ಗುಣಮುಖರಾದವರು ಸಂತಸ ವ್ಯಕ್ತಪಡಿಸಿದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು, ಜಿಲ್ಲಾ ಪಂಚಾಯ್ತಿ ಸಿ.ಇ.ಒ ಮೊಹಮ್ಮದ್ ರೋಶನ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅಶೋಕಕುಮಾರ್, ಜಿಲ್ಲಾ ಸರ್ಜನ್ ಡಾ.ಶಿವಾನಂದ ಕುಡ್ತಲಕರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>