<p>ಜೊಯಿಡಾ: ‘ದಲಿತರ ಕೈಯಲ್ಲಿ ಅಧಿಕಾರವಿದ್ದರೆ ಮಾತ್ರ ಅಂಬೇಡ್ಕರ್ ಅವರ ಸಂವಿಧಾನ ಜಾರಿ ಸಾಧ್ಯ. ಭಾರತದ ಪ್ರತಿಯೊಬ್ಬರಿಗೂ ಸಂವಿಧಾನವೇ ಆಧಾರವಾಗಿದ್ದು, ಇಂದು ವಿದ್ಯಾವಂತರಿಂದಲೇ ಅಂಬೇಡ್ಕರ್ ಅವರ ಆಶಯಗಳಿಗೆ ಮೋಸವಾಗುತ್ತಿದೆ’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ರಾಜು ತಳವಾರ ಹೇಳಿದರು.</p>.<p>ಜೊಯಿಡಾ ತಾಲ್ಲೂಕಿನ ಉಳವಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಮಾರ್ಗ) ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ನಡೆದ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಉಳವಿ ಚನ್ನಬಸವೇಶ್ವರ ದೇವಸ್ಥಾನ ಮುಖ್ಯ ಅರ್ಚಕ ಶಂಕ್ರಯ್ಯ ಕಲ್ಮಠ ಶಾಸ್ತ್ರಿ ಮಾತನಾಡಿ, ‘ಜಾತಿ ಧರ್ಮ ಭೇದವಿಲ್ಲದ ಮಾನವ ಧರ್ಮವೇ ಶ್ರೇಷ್ಠ. ಬೇಡುವುದಕ್ಕಿಂತ ನೀಡುವ ಶಕ್ತಿ ಪಡೆಯಬೇಕು, ಅಂಬೇಡ್ಕರ್ ಅವರ ಜೀವನದ ಬಗ್ಗೆ ಪ್ರತಿ ಮಗುವಿನಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕು’ ಎಂದರು.</p>.<p>ಶಿವಪುರದ ಗೋಪಾಲ ಭಟ್ಟ ಮಾತನಾಡಿ, ‘ಎಲ್ಲರೂ ಶಿಕ್ಷಣ ಪಡೆದಾಗ ಮಾತ್ರ ಅಂಬೇಡ್ಕರ್ ಅವರ ತತ್ವಗಳಿಗೆ ಬೆಲೆ ಬರುತ್ತದೆ’ ಎಂದರು.</p>.<p>ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಭೀಮಾಶಂಕರ ಹರಿಜನ ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು.</p>.<p>ಶಿವಪುರದ ಚನ್ನಬಸವನಂದ ಸ್ವಾಮೀಜಿ, ಶ್ರೀಕಾಂತ ಚಲವಾದಿ ಮಾತನಾಡಿದರು. ಚನ್ನಬಸವೇಶ್ವರ ದೇವಸ್ಥಾನದ ಮುಖ್ಯದ್ವಾರದಿಂದ ವೇದಿಕೆಯವರೆಗೆ ಜೊಯಿಡಾ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಶ್ರೀಕಾಂತ ಕಾಂಬಳೆ ಅಧ್ಯಕ್ಷತೆಯಲ್ಲಿ ಭವ್ಯ ಮೆರವಣಿಗೆ ನಡೆಯಿತು.</p>.<p>ಉಳವಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಮೊಕಾಶಿ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ್ ಗಾಂವಕರ ನಿರೂಪಿಸಿದರು, ಪ್ರಸನ್ನ ಎಚ್ ಸ್ವಾಗತಿಸಿದರು, ಫಕಿರಪ್ಪ ಎಸ್.ಬಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-20-1103683112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೊಯಿಡಾ: ‘ದಲಿತರ ಕೈಯಲ್ಲಿ ಅಧಿಕಾರವಿದ್ದರೆ ಮಾತ್ರ ಅಂಬೇಡ್ಕರ್ ಅವರ ಸಂವಿಧಾನ ಜಾರಿ ಸಾಧ್ಯ. ಭಾರತದ ಪ್ರತಿಯೊಬ್ಬರಿಗೂ ಸಂವಿಧಾನವೇ ಆಧಾರವಾಗಿದ್ದು, ಇಂದು ವಿದ್ಯಾವಂತರಿಂದಲೇ ಅಂಬೇಡ್ಕರ್ ಅವರ ಆಶಯಗಳಿಗೆ ಮೋಸವಾಗುತ್ತಿದೆ’ ಎಂದು ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ರಾಜು ತಳವಾರ ಹೇಳಿದರು.</p>.<p>ಜೊಯಿಡಾ ತಾಲ್ಲೂಕಿನ ಉಳವಿಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ಮಾರ್ಗ) ವತಿಯಿಂದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ ನಡೆದ ಅಂಬೇಡ್ಕರ್ ಅವರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಉಳವಿ ಚನ್ನಬಸವೇಶ್ವರ ದೇವಸ್ಥಾನ ಮುಖ್ಯ ಅರ್ಚಕ ಶಂಕ್ರಯ್ಯ ಕಲ್ಮಠ ಶಾಸ್ತ್ರಿ ಮಾತನಾಡಿ, ‘ಜಾತಿ ಧರ್ಮ ಭೇದವಿಲ್ಲದ ಮಾನವ ಧರ್ಮವೇ ಶ್ರೇಷ್ಠ. ಬೇಡುವುದಕ್ಕಿಂತ ನೀಡುವ ಶಕ್ತಿ ಪಡೆಯಬೇಕು, ಅಂಬೇಡ್ಕರ್ ಅವರ ಜೀವನದ ಬಗ್ಗೆ ಪ್ರತಿ ಮಗುವಿನಲ್ಲಿ ಅರಿವು ಮೂಡಿಸುವ ಕಾರ್ಯ ಆಗಬೇಕು’ ಎಂದರು.</p>.<p>ಶಿವಪುರದ ಗೋಪಾಲ ಭಟ್ಟ ಮಾತನಾಡಿ, ‘ಎಲ್ಲರೂ ಶಿಕ್ಷಣ ಪಡೆದಾಗ ಮಾತ್ರ ಅಂಬೇಡ್ಕರ್ ಅವರ ತತ್ವಗಳಿಗೆ ಬೆಲೆ ಬರುತ್ತದೆ’ ಎಂದರು.</p>.<p>ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಭೀಮಾಶಂಕರ ಹರಿಜನ ಅಂಬೇಡ್ಕರ್ ಕುರಿತು ಉಪನ್ಯಾಸ ನೀಡಿದರು.</p>.<p>ಶಿವಪುರದ ಚನ್ನಬಸವನಂದ ಸ್ವಾಮೀಜಿ, ಶ್ರೀಕಾಂತ ಚಲವಾದಿ ಮಾತನಾಡಿದರು. ಚನ್ನಬಸವೇಶ್ವರ ದೇವಸ್ಥಾನದ ಮುಖ್ಯದ್ವಾರದಿಂದ ವೇದಿಕೆಯವರೆಗೆ ಜೊಯಿಡಾ ತಾಲ್ಲೂಕು ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಶ್ರೀಕಾಂತ ಕಾಂಬಳೆ ಅಧ್ಯಕ್ಷತೆಯಲ್ಲಿ ಭವ್ಯ ಮೆರವಣಿಗೆ ನಡೆಯಿತು.</p>.<p>ಉಳವಿ ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಮೊಕಾಶಿ ಅಧ್ಯಕ್ಷತೆ ವಹಿಸಿದ್ದರು. ಭಾಸ್ಕರ್ ಗಾಂವಕರ ನಿರೂಪಿಸಿದರು, ಪ್ರಸನ್ನ ಎಚ್ ಸ್ವಾಗತಿಸಿದರು, ಫಕಿರಪ್ಪ ಎಸ್.ಬಿ ವಂದಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-20-1103683112</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>