ಗಡಿಕೇಶ್ವಾರ ಭೂಕಂಪ: ‘ಕಲಬುರಗಿ ಜಿಲ್ಲೆಯ ಗಡಿಕೇಶ್ವಾರದಲ್ಲಿ ಸುಮಾರು 10 ವರ್ಷಗಳಿಂದಲೂ ಲಘು ಕಂಪನ ಆಗುತ್ತಿದೆ. ನಾನೇ ಅಲ್ಲಿಗೆ ಭೇಟಿ ನೀಡಿ ಪರಿಸ್ಥಿತಿಯ ಅವಲೋಕನ ಮಾಡಿದ್ದೇನೆ. 30 ವರ್ಷಕ್ಕೂ ಹೆಚ್ಚು ಮನೆಗಳಿಗೆ ಹೋಗಿ ಸಮಸ್ಯೆ ಆಲಿಸಿದ್ದೇನೆ. ಎಲ್ಲರಿಗೂ ತಾತ್ಕಾಲಿಕ ಶೆಡ್ ವ್ಯವಸ್ಥೆ ಮಾಡಿದ್ದೇವೆ. ಸುಣ್ಣದ ಅಂಶ ಅಲ್ಲಿನ ಮಣ್ಣಿನಲ್ಲಿ ಹೆಚ್ಚಾಗಿರುವುದರಿಂದ ಹೆಚ್ಚು ಮಳೆ ಆದಾಗ ಈ ಸಮಸ್ಯೆ ಆಗುತ್ತದೆ’ ಎಂದು ಅಶೋಕ ತಿಳಿಸಿದರು.