<p><strong>ತುಮಕೂರು</strong>: ‘ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ (ಜಾತಿ ಜನಗಣತಿ) ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು’’ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು.</p><p>ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಾತಿ ಜನಗಣತಿಗೆ ಕಾಂಗ್ರೆಸ್ನಲ್ಲೇ ವಿರೋಧ ವ್ಯಕ್ತವಾಗಿದ್ದು, ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದರು.</p><p>‘ಜಾತಿ ಜನಗಣತಿ ವರದಿ ಸಿದ್ಧಪಡಿಸಲು ಈಗಾಗಲೇ ನೂರಾರು ಕೋಟಿ ಹಣ ವೆಚ್ಚ ಮಾಡಲಾಗಿದೆ. ಮತ್ತೊಮ್ಮೆ ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಯಾವುದಕ್ಕೂ ಇಂತಹ ನೂರಾರು ಕೋಟಿ ಹಣ ಖರ್ಚು ಮಾಡಿಲ್ಲವೇ’ ಎಂದು ಪ್ರಶ್ನಿಸಿದರು.</p><p>‘ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ನಾನು ಸಚಿವನಾದ ನಂತರ ಅವಕಾಶ ಮಾಡಿಕೊಟ್ಟಿದ್ದೇನೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಪಡೆದುಕೊಳ್ಳಲು ನೆರವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಅವೈಜ್ಞಾನಿಕವಾಗಿ ಸಿದ್ಧಪಡಿಸಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಗಣತಿ (ಜಾತಿ ಜನಗಣತಿ) ವರದಿಯನ್ನು ತಿರಸ್ಕರಿಸಿ ಮತ್ತೊಮ್ಮೆ ಗಣತಿ ನಡೆಸಬೇಕು’’ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಒತ್ತಾಯಿಸಿದರು.</p><p>ನಗರದ ತಮ್ಮ ಕಚೇರಿಯಲ್ಲಿ ಗುರುವಾರ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಾತಿ ಜನಗಣತಿಗೆ ಕಾಂಗ್ರೆಸ್ನಲ್ಲೇ ವಿರೋಧ ವ್ಯಕ್ತವಾಗಿದ್ದು, ಯಾವುದೇ ಜಾತಿ, ಸಮುದಾಯಕ್ಕೂ ಅನ್ಯಾಯವಾಗಬಾರದು. ಮತ್ತೊಮ್ಮೆ ವೈಜ್ಞಾನಿಕವಾಗಿ ಗಣತಿ ನಡೆಸಬೇಕು’ ಎಂದು ಆಗ್ರಹಿಸಿದರು.</p><p>‘ಜಾತಿ ಜನಗಣತಿ ವರದಿ ಸಿದ್ಧಪಡಿಸಲು ಈಗಾಗಲೇ ನೂರಾರು ಕೋಟಿ ಹಣ ವೆಚ್ಚ ಮಾಡಲಾಗಿದೆ. ಮತ್ತೊಮ್ಮೆ ಅಷ್ಟೊಂದು ಹಣ ನೀಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಯಾವುದಕ್ಕೂ ಇಂತಹ ನೂರಾರು ಕೋಟಿ ಹಣ ಖರ್ಚು ಮಾಡಿಲ್ಲವೇ’ ಎಂದು ಪ್ರಶ್ನಿಸಿದರು.</p><p>‘ರೈಲ್ವೆ ಇಲಾಖೆ ನೇಮಕಾತಿ ಪರೀಕ್ಷೆಯನ್ನು ಕನ್ನಡದಲ್ಲೇ ಬರೆಯಲು ನಾನು ಸಚಿವನಾದ ನಂತರ ಅವಕಾಶ ಮಾಡಿಕೊಟ್ಟಿದ್ದೇನೆ. ಇದರಿಂದ ಕನ್ನಡಿಗರಿಗೆ ಉದ್ಯೋಗ ಪಡೆದುಕೊಳ್ಳಲು ನೆರವಾಗಲಿದೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>