<p><strong>ನವದೆಹಲಿ:</strong> ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರು ನವದೆಹಲಿಗೆ ಸೋಮವಾರ ಬಂದಿದ್ದಾರೆ. ಅವರು ಪಕ್ಷದ ವರಿಷ್ಠರನ್ನು ಮಂಗಳವಾರ ಭೇಟಿ ಮಾಡುವ ಸಾಧ್ಯತೆ ಇದೆ. </p>.<p>ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷದ ಕೆಲವು ನಾಯಕರ ವಿರುದ್ಧ ಸೋಮಣ್ಣ ಮುನಿಸಿಕೊಂಡಿದ್ದರು. ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸೋಮಣ್ಣ ತಿಳಿಸಿದ್ದರು.</p>.<p>‘ನನ್ನ ಸೋಲಿಗೆ ಕಾರಣವಾದವರ ವಿರುದ್ಧ ಕ್ರಮ ಜರುಗಿಸುವುದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕರ್ತವ್ಯ. ಆ ಕೆಲಸ ಮಾಡದಿದ್ದರೆ ಸಿಡಿದೇಳುವೆ’ ಎಂದೂ ಅವರು ಎಚ್ಚರಿಸಿದ್ದರು. ಇದೀಗ ಸೋಮಣ್ಣ ಅಸಮಾಧಾನ ಶಮನ ಮಾಡಲು ರಾಷ್ಟ್ರೀಯ ನಾಯಕರು ಮುಂದಾಗಿದ್ದಾರೆ. ನವದೆಹಲಿಗೆ ಬರುವಂತೆ ರಾಷ್ಟ್ರೀಯ ನಾಯಕರು ಭಾನುವಾರ ಕರೆ ಮಾಡಿದ್ದರು ಎಂದು ಮೂಲಗಳು ಹೇಳಿವೆ. </p>.<p>ಸೋಮಣ್ಣ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಭೇಟಿ ಮಾಡಿ ಸಮಾಲೋಚಿಸುವ ಸಾಧ್ಯತೆ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಿಜೆಪಿಯ ಮಾಜಿ ಸಚಿವ ವಿ.ಸೋಮಣ್ಣ ಅವರು ನವದೆಹಲಿಗೆ ಸೋಮವಾರ ಬಂದಿದ್ದಾರೆ. ಅವರು ಪಕ್ಷದ ವರಿಷ್ಠರನ್ನು ಮಂಗಳವಾರ ಭೇಟಿ ಮಾಡುವ ಸಾಧ್ಯತೆ ಇದೆ. </p>.<p>ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸೋತ ನಂತರ ಪಕ್ಷದ ಕೆಲವು ನಾಯಕರ ವಿರುದ್ಧ ಸೋಮಣ್ಣ ಮುನಿಸಿಕೊಂಡಿದ್ದರು. ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯೂ ಆಗಿದ್ದರು. ಪಕ್ಷದ ವರಿಷ್ಠರನ್ನು ಭೇಟಿ ಮಾಡಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಸೋಮಣ್ಣ ತಿಳಿಸಿದ್ದರು.</p>.<p>‘ನನ್ನ ಸೋಲಿಗೆ ಕಾರಣವಾದವರ ವಿರುದ್ಧ ಕ್ರಮ ಜರುಗಿಸುವುದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಕರ್ತವ್ಯ. ಆ ಕೆಲಸ ಮಾಡದಿದ್ದರೆ ಸಿಡಿದೇಳುವೆ’ ಎಂದೂ ಅವರು ಎಚ್ಚರಿಸಿದ್ದರು. ಇದೀಗ ಸೋಮಣ್ಣ ಅಸಮಾಧಾನ ಶಮನ ಮಾಡಲು ರಾಷ್ಟ್ರೀಯ ನಾಯಕರು ಮುಂದಾಗಿದ್ದಾರೆ. ನವದೆಹಲಿಗೆ ಬರುವಂತೆ ರಾಷ್ಟ್ರೀಯ ನಾಯಕರು ಭಾನುವಾರ ಕರೆ ಮಾಡಿದ್ದರು ಎಂದು ಮೂಲಗಳು ಹೇಳಿವೆ. </p>.<p>ಸೋಮಣ್ಣ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮಂಗಳವಾರ ಭೇಟಿ ಮಾಡಿ ಸಮಾಲೋಚಿಸುವ ಸಾಧ್ಯತೆ ಇದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>