<p><strong>ಮಂಡ್ಯ:</strong> ‘ಕನಕಪುರ- ಮಳವಳ್ಳಿ ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರದ ಬಳಿ ಹಣವಿಲ್ಲ. ಹೀಗಾಗಿ ಯೋಜನೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗಂಭೀರ ಆರೋಪ ಮಾಡಿದರು.</p><p>ಬೆಂಗಳೂರು ಮತ್ತು ಮೈಸೂರು ನಡುವಿನ ರೈಲು ಮಾರ್ಗದಲ್ಲಿ ವಿಂಡೋ ಟ್ರಯಲಿಂಗ್ ಪರಿವೀಕ್ಷಣೆಗಾಗಿ ಮಂಡ್ಯ ರೈಲ್ವೆ ನಿಲ್ದಾಣಕ್ಕೆ ಗುರುವಾರ ಬಂದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. </p><p>‘ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಕನಕಪುರ- ಮಳವಳ್ಳಿ ರೈಲ್ವೆ ಮಾರ್ಗ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ರಾಜ್ಯ ಸರ್ಕಾರದಿಂದ ಸಹಕಾರ ಸಿಕ್ಕಿಲ್ಲ’ ಎಂದರು.</p><p>ಜನಸಾಮಾನ್ಯರಿಗೆ ತೊಂದರೆ ಆಗದ ರೀತಿಯಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯ ನಗರಕ್ಕೆ ಬಸ್ಗಳ ವ್ಯವಸ್ಥೆ ಮತ್ತು ಮೆಮು (ಮೇನ್ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲು ಬೇಕೆನ್ನುವ ಬೇಡಿಕೆ ಇದೆ. ಮಂಡ್ಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ₹25 ಕೋಟಿ ಕೊಟ್ಟಿದ್ದಾರೆ ಎಂದು ಹೇಳಿದರು. </p><p>ಮೈಸೂರಿನಿಂದ ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಜನರಿಗೆ ತೊಂದರೆ ಆಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಸಭೆ ಮಾಡಿ ಕ್ರಮ ವಹಿಸಲಾಗುತ್ತಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೂ ಚರ್ಚೆ ಮಾಡಿದ್ದು ನಿಮ್ಮ ಕನಸು ನಿವಾರಣೆ ಮಾಡುತ್ತಾರೆ ಎಂದರು.</p><p>ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಯದುವೀರ್ ಒಡೆಯರ್, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ. ತಮ್ಮಣ್ಣ ಇತರರಿದ್ದರು. ವಿಶೇಷ ರೈಲಿನ ಮೂಲಕ ಮಂಡ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು.</p><p>ನಂತರ ಸಚಿವರು ಹಾಗೂ ಅಧಿಕಾರಿಗಳು ಮಂಡ್ಯ ರೈಲ್ವೆ ನಿಲ್ದಾಣದ ಆಧುನೀಕರಣ, ಅಗತ್ಯ ಅನುದಾನ, ಕಾಮಗಾರಿ, ಸೌಲಭ್ಯ ಹಾಗೂ ರೈಲ್ವೆ ಮಾರ್ಗಗಳ ಪರಿಶೀಲಿಸಿದರು. ಅಂತೆಯೇ ಅಧಿಕಾರಿಗಳು, ಸ್ಥಳೀಯರ ಜತೆ ಸಮಾಲೋಚನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಕನಕಪುರ- ಮಳವಳ್ಳಿ ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರದ ಬಳಿ ಹಣವಿಲ್ಲ. ಹೀಗಾಗಿ ಯೋಜನೆ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಗಂಭೀರ ಆರೋಪ ಮಾಡಿದರು.</p><p>ಬೆಂಗಳೂರು ಮತ್ತು ಮೈಸೂರು ನಡುವಿನ ರೈಲು ಮಾರ್ಗದಲ್ಲಿ ವಿಂಡೋ ಟ್ರಯಲಿಂಗ್ ಪರಿವೀಕ್ಷಣೆಗಾಗಿ ಮಂಡ್ಯ ರೈಲ್ವೆ ನಿಲ್ದಾಣಕ್ಕೆ ಗುರುವಾರ ಬಂದ ಸಂದರ್ಭದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. </p><p>‘ನಾವು ಅಧಿಕಾರಕ್ಕೆ ಬಂದ ತಕ್ಷಣವೇ ಕನಕಪುರ- ಮಳವಳ್ಳಿ ರೈಲ್ವೆ ಮಾರ್ಗ ಯೋಜನೆ ಕೈಗೆತ್ತಿಕೊಳ್ಳಲಾಗಿತ್ತು. ಆದರೆ, ರಾಜ್ಯ ಸರ್ಕಾರದಿಂದ ಸಹಕಾರ ಸಿಕ್ಕಿಲ್ಲ’ ಎಂದರು.</p><p>ಜನಸಾಮಾನ್ಯರಿಗೆ ತೊಂದರೆ ಆಗದ ರೀತಿಯಲ್ಲಿ ರೈಲ್ವೆ ನಿಲ್ದಾಣ ಪರಿಶೀಲನೆ ಮಾಡಲಾಗುತ್ತಿದೆ. ಮಂಡ್ಯ ನಗರಕ್ಕೆ ಬಸ್ಗಳ ವ್ಯವಸ್ಥೆ ಮತ್ತು ಮೆಮು (ಮೇನ್ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್) ರೈಲು ಬೇಕೆನ್ನುವ ಬೇಡಿಕೆ ಇದೆ. ಮಂಡ್ಯ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ₹25 ಕೋಟಿ ಕೊಟ್ಟಿದ್ದಾರೆ ಎಂದು ಹೇಳಿದರು. </p><p>ಮೈಸೂರಿನಿಂದ ಬೆಂಗಳೂರು ರೈಲ್ವೆ ಮಾರ್ಗದಲ್ಲಿ ಜನರಿಗೆ ತೊಂದರೆ ಆಗಿರುವ ಬಗ್ಗೆ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳ ಜತೆ ಸಭೆ ಮಾಡಿ ಕ್ರಮ ವಹಿಸಲಾಗುತ್ತಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರೂ ಚರ್ಚೆ ಮಾಡಿದ್ದು ನಿಮ್ಮ ಕನಸು ನಿವಾರಣೆ ಮಾಡುತ್ತಾರೆ ಎಂದರು.</p><p>ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಸಂಸದ ಯದುವೀರ್ ಒಡೆಯರ್, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ. ತಮ್ಮಣ್ಣ ಇತರರಿದ್ದರು. ವಿಶೇಷ ರೈಲಿನ ಮೂಲಕ ಮಂಡ್ಯ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ಕೇಂದ್ರ ಸಚಿವರನ್ನು ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಸ್ವಾಗತಿಸಿ ಅಭಿನಂದನೆ ಸಲ್ಲಿಸಿದರು.</p><p>ನಂತರ ಸಚಿವರು ಹಾಗೂ ಅಧಿಕಾರಿಗಳು ಮಂಡ್ಯ ರೈಲ್ವೆ ನಿಲ್ದಾಣದ ಆಧುನೀಕರಣ, ಅಗತ್ಯ ಅನುದಾನ, ಕಾಮಗಾರಿ, ಸೌಲಭ್ಯ ಹಾಗೂ ರೈಲ್ವೆ ಮಾರ್ಗಗಳ ಪರಿಶೀಲಿಸಿದರು. ಅಂತೆಯೇ ಅಧಿಕಾರಿಗಳು, ಸ್ಥಳೀಯರ ಜತೆ ಸಮಾಲೋಚನೆ ನಡೆಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>