ಸುಮ್ಮನೆ ಒಂದು ಮನೆ ಕೊಟ್ಟಿಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಾರೆ. ಆದರೆ, ಮನೆ ಕೊಡಲು ಅವರು ಬಿಟ್ಟಿಲ್ಲ. ಅವರು ಹಿಂದೆ ಮಾಡಿದ ತಪ್ಪುಗಳನ್ನು ಸರಿಪಡಿಸಿದ್ದೇವೆ. ಕೇಂದ್ರದ ಆ್ಯಪ್ನಲ್ಲಿ ದತ್ತಾಂಶಗಳನ್ನು ಫೀಡ್ ಮಾಡುವ ಬದಲು ರಾಜ್ಯಸರ್ಕಾರವೇ ಪ್ರತ್ಯೇಕ ಆ್ಯಪ್ ರೂಪಿಸಿ ದತ್ತಾಂಶ ತುಂಬಿ ಗೊಂದಲ ಸೃಷ್ಟಿಸಿತ್ತು. ಮಾತು ಮನೆ ಕೆಡಿಸಿತು ಎನ್ನುವ ಮಾತಿನಂತೆ ಸಿದ್ದರಾಮಯ್ಯ ಮಾತನಾಡುತ್ತಾರೆ. ಅವರಿಗೆ ಈ ಗೊಂದಲದ ಕುರಿತು ಮಾಹಿತಿ ಇಲ್ಲ. ನಾನಾಗಿರುವುದಕ್ಕೆ ಈಗ ಈ ಅಡೆ ತಡೆಗಳನ್ನು ಬಗೆಹರಿಸಿದ್ದೇನೆ’ ಎಂದರು.