<p><strong>ಹರಿಹರ:</strong> ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಸತಿನಿಲಯದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲೂಸಿ) ಪೊಲೀಸರಿಗೆ ವರದಿ ನೀಡಿದೆ.</p><p>ಮೂವರು ಸಂತ್ರಸ್ತ ಬಾಲಕರ ಸಮಾಲೋಚನೆ ನಡೆಸಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮೇ 16ರಂದು ಗ್ರಾಮಾಂತರ ಪೊಲೀಸ್ ಠಾಣೆಗೆ ವರದಿ ಸಲ್ಲಿಸಿದೆ. ಎರಡು ಪುಟಗಳ ಈ ವರದಿಯಲ್ಲಿ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ.</p><p>‘ಮಠದಲ್ಲಿದ್ದ ತಮ್ಮ ಮಕ್ಕಳ ಮೇಲೆ ವಚನಾನಂದ ಸ್ವಾಮೀಜಿ ದೌರ್ಜನ್ಯ ನಡೆಸಿದ್ದಾರೆ’ ಎಂದು ಆರೋಪಿಸಿ ಮೂವರು ಪಾಲಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ಏಪ್ರಿಲ್ 17ರಂದು ಮಠಕ್ಕೆ ಭೇಟಿ ನೀಡಿದ್ದ ಸಮಿತಿ ಅಧ್ಯಕ್ಷೆ ಮಂಜುಳಾ ಮಹೇಶ್ ನೇತೃತ್ವದ ತಂಡ ಅಡುಗೆ ಕೋಣೆ, ಮಕ್ಕಳು ಮಲಗುತ್ತಿದ್ದ ಕೊಠಡಿ, ಭೋಜನಾಲಯ ಸೇರಿದಂತೆ ಇತರೆಡೆ ಪರಿಶೀಲನೆ ನಡೆಸಿತ್ತು. ವಚನಾನಂದ ಸ್ವಾಮೀಜಿ ಹೇಳಿಕೆಯನ್ನೂ ದಾಖಲಿಸಿಕೊಂಡಿತ್ತು.</p><p>16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೇ 8ರಂದು ದಾಖಲಾದ ‘ಪೋಕ್ಸೊ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ.</p><p><strong>ಸ್ವಾಮೀಜಿ 4 ಗಂಟೆ ವಿಚಾರಣೆ</strong></p><p>ವಚನಾನಂದ ಸ್ವಾಮೀಜಿ ಸೋಮವಾರ 2ನೇ ಬಾರಿಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ 4 ಗಂಟೆ ವಿಚಾರಣೆ ಎದುರಿಸಿದರು.</p><p>ಭಕ್ತರ ಕಾರಿನಲ್ಲಿ ಪೊಲೀಸ್ ಠಾಣೆಗೆ ಆಗಮಿಸಿದ ಸ್ವಾಮೀಜಿ ಅವರನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.15 ರವರೆಗೆ ತನಿಖಾಧಿಕಾರಿ ಸುರೇಶ್ ಸಗರಿ ವಿಚಾರಣೆ ನಡೆಸಿದರು.</p><p>‘ಪೊಲೀಸರು ನೋಟಿಸ್ ನೀಡಿದ್ದರಿಂದ 2ನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದೇನೆ. ತನಿಖಾ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದು ಠಾಣೆಯಿಂದ ಹೊರಬಂದ ಬಳಿಕ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>ಮೇ 14 ರಂದು ಮೊದಲ ಬಾರಿಗೆ ಪೊಲೀಸರು ಸ್ವಾಮೀಜಿಯನ್ನು 5 ಗಂಟೆ ವಿಚಾರಣೆ ನಡೆಸಿ, ವೈದ್ಯಕೀಯ ಪರೀಕ್ಷೆಯ ಪ್ರಕ್ರಿಯೆ ಪೂರ್ಣಗೊಳಿಸಿದ್ದರು.</p>.<div><blockquote>ಸಂತ್ರಸ್ತ ಬಾಲಕರಲ್ಲಿ ಇಬ್ಬರ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದಾರೆ. ಇನ್ನೂ ಕೆಲವರ ಹೇಳಿಕೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ</blockquote><span class="attribution">ಡಾ.ಎಚ್.ಟಿ. ಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಿಹರ:</strong> ಇಲ್ಲಿನ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ಪದಚ್ಯುತ ಪೀಠಾಧ್ಯಕ್ಷ ವಚನಾನಂದ ಸ್ವಾಮೀಜಿ ವಸತಿನಿಲಯದ ಮಕ್ಕಳನ್ನು ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲೂಸಿ) ಪೊಲೀಸರಿಗೆ ವರದಿ ನೀಡಿದೆ.</p><p>ಮೂವರು ಸಂತ್ರಸ್ತ ಬಾಲಕರ ಸಮಾಲೋಚನೆ ನಡೆಸಿದ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮೇ 16ರಂದು ಗ್ರಾಮಾಂತರ ಪೊಲೀಸ್ ಠಾಣೆಗೆ ವರದಿ ಸಲ್ಲಿಸಿದೆ. ಎರಡು ಪುಟಗಳ ಈ ವರದಿಯಲ್ಲಿ ಕಾನೂನು ಕ್ರಮಕ್ಕೆ ಶಿಫಾರಸು ಮಾಡಿದೆ ಎಂದು ಮೂಲಗಳು ಮಾಹಿತಿ ನೀಡಿವೆ.</p><p>‘ಮಠದಲ್ಲಿದ್ದ ತಮ್ಮ ಮಕ್ಕಳ ಮೇಲೆ ವಚನಾನಂದ ಸ್ವಾಮೀಜಿ ದೌರ್ಜನ್ಯ ನಡೆಸಿದ್ದಾರೆ’ ಎಂದು ಆರೋಪಿಸಿ ಮೂವರು ಪಾಲಕರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ಏಪ್ರಿಲ್ 17ರಂದು ಮಠಕ್ಕೆ ಭೇಟಿ ನೀಡಿದ್ದ ಸಮಿತಿ ಅಧ್ಯಕ್ಷೆ ಮಂಜುಳಾ ಮಹೇಶ್ ನೇತೃತ್ವದ ತಂಡ ಅಡುಗೆ ಕೋಣೆ, ಮಕ್ಕಳು ಮಲಗುತ್ತಿದ್ದ ಕೊಠಡಿ, ಭೋಜನಾಲಯ ಸೇರಿದಂತೆ ಇತರೆಡೆ ಪರಿಶೀಲನೆ ನಡೆಸಿತ್ತು. ವಚನಾನಂದ ಸ್ವಾಮೀಜಿ ಹೇಳಿಕೆಯನ್ನೂ ದಾಖಲಿಸಿಕೊಂಡಿತ್ತು.</p><p>16 ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೇ 8ರಂದು ದಾಖಲಾದ ‘ಪೋಕ್ಸೊ’ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಾಂತರ ಠಾಣೆಯ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದಾರೆ.</p><p><strong>ಸ್ವಾಮೀಜಿ 4 ಗಂಟೆ ವಿಚಾರಣೆ</strong></p><p>ವಚನಾನಂದ ಸ್ವಾಮೀಜಿ ಸೋಮವಾರ 2ನೇ ಬಾರಿಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ 4 ಗಂಟೆ ವಿಚಾರಣೆ ಎದುರಿಸಿದರು.</p><p>ಭಕ್ತರ ಕಾರಿನಲ್ಲಿ ಪೊಲೀಸ್ ಠಾಣೆಗೆ ಆಗಮಿಸಿದ ಸ್ವಾಮೀಜಿ ಅವರನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.15 ರವರೆಗೆ ತನಿಖಾಧಿಕಾರಿ ಸುರೇಶ್ ಸಗರಿ ವಿಚಾರಣೆ ನಡೆಸಿದರು.</p><p>‘ಪೊಲೀಸರು ನೋಟಿಸ್ ನೀಡಿದ್ದರಿಂದ 2ನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದೇನೆ. ತನಿಖಾ ಪ್ರಕ್ರಿಯೆಯಲ್ಲಿ ಪೊಲೀಸರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದು ಠಾಣೆಯಿಂದ ಹೊರಬಂದ ಬಳಿಕ ಸ್ವಾಮೀಜಿ ಸುದ್ದಿಗಾರರೊಂದಿಗೆ ಮಾತನಾಡಿದರು.</p><p>ಮೇ 14 ರಂದು ಮೊದಲ ಬಾರಿಗೆ ಪೊಲೀಸರು ಸ್ವಾಮೀಜಿಯನ್ನು 5 ಗಂಟೆ ವಿಚಾರಣೆ ನಡೆಸಿ, ವೈದ್ಯಕೀಯ ಪರೀಕ್ಷೆಯ ಪ್ರಕ್ರಿಯೆ ಪೂರ್ಣಗೊಳಿಸಿದ್ದರು.</p>.<div><blockquote>ಸಂತ್ರಸ್ತ ಬಾಲಕರಲ್ಲಿ ಇಬ್ಬರ ಹೇಳಿಕೆಯನ್ನು ತನಿಖಾಧಿಕಾರಿ ದಾಖಲಿಸಿಕೊಂಡಿದ್ದಾರೆ. ಇನ್ನೂ ಕೆಲವರ ಹೇಳಿಕೆ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ</blockquote><span class="attribution">ಡಾ.ಎಚ್.ಟಿ. ಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>