ಬೆಂಗಳೂರು: ‘ಮೀಸಲಾತಿಗೆ ಒತ್ತಾಯಿಸಿ ಬೆಂಗಳೂರಿನಲ್ಲಿ ಭಾನುವಾರ ನಡೆದ ಮಹಾರ್ಯಾಲಿ ನಂತರ ಧರಣಿ, ಸತ್ಯಾಗ್ರಹ ಮಾಡಬಾರದು ಎಂದು ನಿರ್ಧಾರವಾಗಿತ್ತು. ಆದರೆ, ಜನನಾಯಕರ ಹಿತಾಸಕ್ತಿಗೋಸ್ಕರ ಧರಣಿ ಮುಂದುವರಿಸಲು ತೀರ್ಮಾನಿಸಿದ್ದಕ್ಕೆ ಬೇಸರವಾಗಿ ಹಿಂದೆ ಸರಿದಿದ್ದೇನೆ’ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.