‘ಸಚಿವರ ಗಮನಕ್ಕೆ ಬಾರದೆ ಅಧಿಕಾರಿಗಳು ಅಕ್ರಮ ಎಸಗುತ್ತಿದ್ದಾರೆಯೇ’ ಎಂದು ಕೇಳಿದಾಗ, ‘ಆಡಳಿತ ಮಂಡಳಿಯ ನಿರ್ಣಯ ಇಲ್ಲದೆ ಒಂದು ಬ್ಯಾಂಕಿನ ಖಾತೆಯಿಂದ ಮತ್ತೊಂದು ಖಾತೆಗೆ ಹಣ ವರ್ಗಾವಣೆ ಮಾಡಲು ಆಗುವುದಿಲ್ಲ. ನಾನು ಇಂಧನ ಸಚಿವನಾಗಿದ್ದಾಗ ಅನೇಕ ಬ್ಯಾಂಕಿನವರು ಬಂದು ನಮ್ಮಲ್ಲಿ ಠೇವಣಿ ಇಡುವಂತೆ ಕೇಳುತ್ತಿದ್ದರು. ನಾನು ಇದಕ್ಕೆಲ್ಲ ಪ್ರತಿಕ್ರಿಯೆ ನೀಡುತ್ತಿರಲಿಲ್ಲ’ ಎಂದರು.