ಶುಕ್ರವಾರ, 25 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ನಾಗೇಂದ್ರ, ದದ್ದಲ್‌ಗೆ ಎಸ್‌ಐಟಿ ನೋಟಿಸ್‌

Published : 6 ಜುಲೈ 2024, 0:40 IST
Last Updated : 6 ಜುಲೈ 2024, 0:40 IST
ಫಾಲೋ ಮಾಡಿ
Comments
ಅಧ್ಯಕ್ಷರ ಆಪ್ತನಿಗೆ ಹಣ ಸಂದಾಯ?
ಬಸನಗೌಡ ದದ್ದಲ್‌ ಅವರ ಆಪ್ತರೊಬ್ಬರಿಗೆ ಹಣ ಸಂದಾಯ ಆಗಿರುವುದಕ್ಕೆ ದಾಖಲೆಗಳು ಸಿಕ್ಕಿದ್ದು, ಆ ಮಾಹಿತಿ ಆಧರಿಸಿ ಅಧ್ಯಕ್ಷರನ್ನು ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ. ‘ಅಧ್ಯಕ್ಷರ ಆಪ್ತನಿಗೆ ಬ್ಯಾಂಕ್‌ ಖಾತೆ ಅಥವಾ ಡಿಜಿಟಲ್ ಪೇಮೆಂಟ್‌ ಮೂಲಕ ಹಣ ಸಂದಾಯ ಆಗಿಲ್ಲ. ನಗದು ರೂಪದಲ್ಲಿ ಹಣ ಕೊಡಲಾಗಿದೆ. ಹೋಟೆಲ್‌ ಸೇರಿ ಹಲವು ಸ್ಥಳಗಳಲ್ಲಿದ್ದ ಸಿ.ಸಿ ಟಿವಿ ಕ್ಯಾಮೆರಾ ಪರಿಶೀಲಿಸಿ ಡಿವಿಆರ್‌ ಜಪ್ತಿ ಮಾಡಲಾಗಿದೆ’ ಎಂದು ಎಸ್‌ಐಟಿ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.
ಕೆಲವು ಪ್ರಮುಖರಿಗೆ ಹಣ ಸಂದಾಯ
ಈ ಪ್ರಕರಣದಲ್ಲಿ ಇದುವರೆಗೂ ಒಟ್ಟು ₹28 ಕೋಟಿ ಮೊತ್ತದ ನಗದು ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣವನ್ನು ಎಸ್‌ಐಟಿ ಪೊಲೀಸರು ಜಪ್ತಿ ಮಾಡಿದ್ದಾರೆ. 11 ಮಂದಿಯನ್ನು ಬಂಧಿಸಿ ಅವರಿಂದ ₹14 ಕೋಟಿ ನಗದು ಬ್ಯಾಂಕ್‌ಗಳಲ್ಲಿ ₹10 ಕೋಟಿ ಮುಟ್ಟುಗೋಲು ಹಾಗೂ ₹4 ಕೋಟಿ ಚಿನ್ನಾಭರಣ ಜಪ್ತಿ ಮಾಡಲಾಗಿದೆ. ‘ಫಸ್ಟ್‌ ಫೈನಾನ್ಸ್ ಕ್ರೆಡಿಟ್ ಕೋ–ಆಪರೇಟಿವ್‌ ಸೊಸೈಟಿ’ಯಿಂದ 18 ಖಾತೆಗಳಿಗೆ ಹಣ ವರ್ಗಾವಣೆ ಆಗಿದ್ದು ತನಿಖೆ ಆರಂಭದಲ್ಲಿ ಪತ್ತೆಯಾಗಿತ್ತು. ತನಿಖೆ ಮುಂದುವರಿಸಿದ್ದ ಎಸ್‌ಐಟಿಗೆ 700ಕ್ಕೂ ಹೆಚ್ಚು ನಕಲಿ ಖಾತೆಗಳಿಗೆ ಹಣ ವರ್ಗಾವಣೆ ಆಗಿರುವ ಮಾಹಿತಿ ಲಭಿಸಿತ್ತು. ಅದರಲ್ಲಿ ಚಿನ್ನಾಭರಣ ಮಳಿಗೆಗಳು ಹೋಟೆಲ್‌ ಹಾಗೂ ಬಾರ್‌ ಆ್ಯಂಡ್ ರೆಸ್ಟೋರೆಂಟ್‌ ಮಾಲೀಕರ ಖಾತೆಗಳೂ ಸೇರಿ ಒಟ್ಟು 197 ಖಾತೆಗಳಿಂದ ಅಂದಾಜು ₹10 ಕೋಟಿಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ಖಾತೆದಾರರಿಗೆ ಕಮಿಷನ್‌ ನೀಡಿ ಹಣ ಡ್ರಾ ಮಾಡಿಕೊಳ್ಳಲಾಗಿತ್ತು. ಅಲ್ಲದೇ ವರ್ಗಾವಣೆ ಆಗಿರುವ ಹಣವು ಬೆಂಗಳೂರು ಬಳ್ಳಾರಿಯ ‘ಕೆಲವು ಪ್ರಮುಖರಿಗೆ’ ನಗದು ರೂಪದಲ್ಲಿ ದೊಡ್ಡ ಮೊತ್ತದಲ್ಲಿ ಸಂದಾಯ ಆಗಿರುವುದನ್ನು ಎಸ್‌ಐಟಿ ಪತ್ತೆಹಚ್ಚಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT