ಹತ್ತನೇಯ ತರಗತಿಯ 7ನೇ ಪಾಠ 'ವೀರಲವ'ದಲ್ಲಿ ವಾಲ್ಮೀಕಿ ಕುರಿತು 'ಯೌವನಾವಸ್ಥೆಯಲ್ಲಿ ಬೇಡರ ಸಂಗಡ ಸೇರಿ ದಾರಿಗಳ್ಳನಾಗಿದ್ದ' ಎಂದು ನಮೂದಿಸಲಾಗಿದೆ. ದೇಶದ ಮೂಲನಿವಾಸಿ ಬುಡಕಟ್ಟು ಸಮುದಾಯವಾಗಿರುವ ಬೇಡ ಸಮುದಾಯವನ್ನು 'ಕಳ್ಳರಾಗಿದ್ದರು' ಎಂಬಂತೆ ಬಿಂಬಿಸುವ ಮೂಲಕ ಇಡೀ ಬೇಡ, ವಾಲ್ಮೀಕಿ ಸಮುದಾಯಕ್ಕೆ ಅವಮಾನ ಮಾಡಲಾಗಿದೆ. ವಾಲ್ಮೀಕಿ ಸಮುದಾಯದ ಭಾವನೆಯನ್ನು ಕೆಣಕಲಾಗಿದೆ ಎಂದು ಪತ್ರದಲ್ಲಿ ದೂರಲಾಗಿದೆ.