<p><strong>ಬೆಂಗಳೂರು: </strong>ಪರಿಶಿಷ್ಟ ಪಂಗಡದವರಿಗೆ ಶೇ7.5 ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ನಗರದಲ್ಲಿ ಮಂಗಳವಾರಬೃಹತ್ ಪ್ರತಿಭಟನೆ ನಡೆಸಿದರು.</p>.<p>ಮೀಸಲಾತಿಗೆ ಒತ್ತಾಯಿಸಿ ಶಕ್ತಿ ಪ್ರದರ್ಶನ ನಡೆಸಿದರು. ಪ್ರತಿಭಟನೆ ನಿರತರು ವೀರ ಮದಕರಿ ಘೋಷಣೆ ಕೂಗಿದರು. ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಪುರಿ ಸ್ವಾಮೀಜಿ ಇದ್ದರು.</p>.<p>ಫ್ರೀಡಂ ಪಾರ್ಕ್ಗೆ ರಾಜ್ಯದ ವಿವಿಧ ಭಾಗಗಳಿಂದ ಬಂದ ಸಾವಿರಾರು ಮಂದಿ, ಅಲ್ಲಿಂದ ವಿಧಾನಸೌಧಕ್ಕೆ ಮೆರವಣಿಗೆ ನಡೆಸಿದರು. ವಿಧಾನಸೌಧ ಮುಂಭಾಗದ ರಸ್ತೆಯಲ್ಲಿ ಧರಣೆ ನಡೆಸಿದ್ದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಯಿತು. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು.</p>.<p>ಫ್ರೀಡಂ ಪಾರ್ಕ್ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಪ್ರತಿಭಟನೆಗೆ ಬಂದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಶಾಸಕ ಶ್ರೀರಾಮಲು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು.</p>.<p>ಪ್ರತಿಭಟನೆ ವೇಳೆ ಸಚಿವ ಡಿ.ಕೆ.ಶಿವಕುಮಾರ್ ಅವರ ಕಾರು ಸಹ ರಸ್ತೆಯಲ್ಲಿ ಸಿಲುಕಿಕೊಂಡಿತ್ತು. ಹಾಗಾಗಿ, ಅವರು ಕಾರು ಇಳಿದು ಮೆಟ್ರೊದಲ್ಲಿ ಸೆಂಟ್ರಲ್ ಕಾಲೇಜ್ ವರೆಗೆ ತೆರಳಿ ನ್ಯಾಯಾಲಯಕ್ಕೆ ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರಿಶಿಷ್ಟ ಪಂಗಡದವರಿಗೆ ಶೇ7.5 ರಷ್ಟು ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ನಗರದಲ್ಲಿ ಮಂಗಳವಾರಬೃಹತ್ ಪ್ರತಿಭಟನೆ ನಡೆಸಿದರು.</p>.<p>ಮೀಸಲಾತಿಗೆ ಒತ್ತಾಯಿಸಿ ಶಕ್ತಿ ಪ್ರದರ್ಶನ ನಡೆಸಿದರು. ಪ್ರತಿಭಟನೆ ನಿರತರು ವೀರ ಮದಕರಿ ಘೋಷಣೆ ಕೂಗಿದರು. ವಾಲ್ಮೀಕಿ ಸಮುದಾಯದ ಪ್ರಸನ್ನಾನಂದ ಪುರಿ ಸ್ವಾಮೀಜಿ ಇದ್ದರು.</p>.<p>ಫ್ರೀಡಂ ಪಾರ್ಕ್ಗೆ ರಾಜ್ಯದ ವಿವಿಧ ಭಾಗಗಳಿಂದ ಬಂದ ಸಾವಿರಾರು ಮಂದಿ, ಅಲ್ಲಿಂದ ವಿಧಾನಸೌಧಕ್ಕೆ ಮೆರವಣಿಗೆ ನಡೆಸಿದರು. ವಿಧಾನಸೌಧ ಮುಂಭಾಗದ ರಸ್ತೆಯಲ್ಲಿ ಧರಣೆ ನಡೆಸಿದ್ದರಿಂದ ವಾಹನ ದಟ್ಟಣೆ ಉಂಟಾಗಿ ಸಂಚಾರ ಅಸ್ತವ್ಯಸ್ತವಾಯಿತು. ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಹರಸಾಹಸಪಟ್ಟರು.</p>.<p>ಫ್ರೀಡಂ ಪಾರ್ಕ್ನಲ್ಲಿ ಬೃಹತ್ ವೇದಿಕೆ ನಿರ್ಮಿಸಲಾಗಿದೆ. ಪ್ರತಿಭಟನೆಗೆ ಬಂದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಲಾಗಿದೆ. ಬಿಜೆಪಿ ಶಾಸಕ ಶ್ರೀರಾಮಲು ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದರು.</p>.<p>ಪ್ರತಿಭಟನೆ ವೇಳೆ ಸಚಿವ ಡಿ.ಕೆ.ಶಿವಕುಮಾರ್ ಅವರ ಕಾರು ಸಹ ರಸ್ತೆಯಲ್ಲಿ ಸಿಲುಕಿಕೊಂಡಿತ್ತು. ಹಾಗಾಗಿ, ಅವರು ಕಾರು ಇಳಿದು ಮೆಟ್ರೊದಲ್ಲಿ ಸೆಂಟ್ರಲ್ ಕಾಲೇಜ್ ವರೆಗೆ ತೆರಳಿ ನ್ಯಾಯಾಲಯಕ್ಕೆ ಹೋದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>