<p><strong>ಬೆಂಗಳೂರು</strong>: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಎರಡನೇ ಆರೋಪಿಯಾಗಿರುವ ಹೈದರಾಬಾದ್ನ ಸತ್ಯನಾರಾಯಣ ವರ್ಮ ವಿರುದ್ಧ ಹೊರಡಿಸಲಾಗಿದ್ದ ಬಾಡಿ ವಾರಂಟ್ ಅನ್ನು ಜಾರಿಗೊಳಿಸದೆ; ಕೋರ್ಟ್ ಆದೇಶ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಕಾರಾಗೃಹಗಳ ಡಿಜಿ ಮತ್ತು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಅವರ ಖುದ್ದು ಹಾಜರಿಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.</p>.<p>ಸೋಮವಾರ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ‘ಯ ವಿಶೇಷ ನ್ಯಾಯಾಲಯದ (ಸಿಸಿಎಚ್-82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಯಿತು.</p>.<p>ವಿಚಾರಣೆ ವೇಳೆ ಇಡಿ ಪರ ಹಾಜರಾಗಿದ್ದ ಪಿ.ಪ್ರಸನ್ನ ಕುಮಾರ್, ಪ್ರಕರಣದ ಎರಡನೇ ಆರೋಪಿ ಸತ್ಯನಾರಾಯಣ ವರ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಇಸಿಐಆರ್ (ಎನ್ಫೋರ್ಸ್ಮೆಂಟ್ ಕೇಸ್ ಇನ್ಫಾರ್ಮೇಶನ್ ರಿಪೋರ್ಟ್) ದಾಖಲಿಸಿದೆ. ಈ ಸಂಬಂಧ ಇಡಿ ಕೋರಿದ್ದ ಅರ್ಜಿಯನ್ನು ಮಾನ್ಯ ಮಾಡಿದ್ದ ಕೋರ್ಟ್ ಅವರ ವಿರುದ್ಧ ಎರಡು ಬಾರಿ ಬಾಡಿ ವಾರಂಟ್ ಹೊರಡಿಸಿ ಆದೇಶಿಸಿತ್ತು. ಆದರೆ, ಕೋರ್ಟ್ನ ಈ ಆದೇಶವನ್ನು ಉಲ್ಲಂಘಿಸಿದ ಜೈಲು ಅಧಿಕಾರಿಗಳು ಅವರನ್ನು ಹಗರಣಕ್ಕೆ ಸಂಬಂಧಿಸಿದ ಮೂರನೇ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳ ವಿಚಾರಣೆಗಾಗಿ ಅವರ ವಶಕ್ಕೆ ಒಪ್ಪಿಸಿದೆ’ ಎಂದು ಆಕ್ಷೇಪಿಸಿದರು.</p>.<p>ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ರಾಜ್ಯ ಕಾರಾಗೃಹಗಳ ಡಿಜಿ ಮತ್ತು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಅವರಿಗೆ ಷೋಕಾಸ್ ನೋಟಿಸ್ ಜಾರಿಗಳಿಸಲು ಮತ್ತು ಮುಂದಿನ ವಿಚಾರಣೆ ವೇಳೆಗೆ ಖುದ್ದು ಹಾಜರಿರುವಂತೆ ಆದೇಶಿಸಿದರು. ಇದೇ ವೇಳೆ ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿಯನ್ನೂ ವಿಸ್ತರಿಸಿ ಆದೇಶಿಸಲಾಯಿತು. ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಎರಡನೇ ಆರೋಪಿಯಾಗಿರುವ ಹೈದರಾಬಾದ್ನ ಸತ್ಯನಾರಾಯಣ ವರ್ಮ ವಿರುದ್ಧ ಹೊರಡಿಸಲಾಗಿದ್ದ ಬಾಡಿ ವಾರಂಟ್ ಅನ್ನು ಜಾರಿಗೊಳಿಸದೆ; ಕೋರ್ಟ್ ಆದೇಶ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಕಾರಾಗೃಹಗಳ ಡಿಜಿ ಮತ್ತು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಅವರ ಖುದ್ದು ಹಾಜರಿಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶಿಸಿದೆ.</p>.<p>ಸೋಮವಾರ ವಿಡಿಯೊ ಕಾನ್ಫರೆನ್ಸ್ ಮುಖಾಂತರ ಪ್ರಕರಣದ ಮೊದಲ ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ‘ಯ ವಿಶೇಷ ನ್ಯಾಯಾಲಯದ (ಸಿಸಿಎಚ್-82) ನ್ಯಾಯಾಧೀಶ ಸಂತೋಷ ಗಜಾನನ ಭಟ್ ಅವರ ಮುಂದೆ ಹಾಜರುಪಡಿಸಲಾಯಿತು.</p>.<p>ವಿಚಾರಣೆ ವೇಳೆ ಇಡಿ ಪರ ಹಾಜರಾಗಿದ್ದ ಪಿ.ಪ್ರಸನ್ನ ಕುಮಾರ್, ಪ್ರಕರಣದ ಎರಡನೇ ಆರೋಪಿ ಸತ್ಯನಾರಾಯಣ ವರ್ಮ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಇಸಿಐಆರ್ (ಎನ್ಫೋರ್ಸ್ಮೆಂಟ್ ಕೇಸ್ ಇನ್ಫಾರ್ಮೇಶನ್ ರಿಪೋರ್ಟ್) ದಾಖಲಿಸಿದೆ. ಈ ಸಂಬಂಧ ಇಡಿ ಕೋರಿದ್ದ ಅರ್ಜಿಯನ್ನು ಮಾನ್ಯ ಮಾಡಿದ್ದ ಕೋರ್ಟ್ ಅವರ ವಿರುದ್ಧ ಎರಡು ಬಾರಿ ಬಾಡಿ ವಾರಂಟ್ ಹೊರಡಿಸಿ ಆದೇಶಿಸಿತ್ತು. ಆದರೆ, ಕೋರ್ಟ್ನ ಈ ಆದೇಶವನ್ನು ಉಲ್ಲಂಘಿಸಿದ ಜೈಲು ಅಧಿಕಾರಿಗಳು ಅವರನ್ನು ಹಗರಣಕ್ಕೆ ಸಂಬಂಧಿಸಿದ ಮೂರನೇ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಅಧೀನದಲ್ಲಿರುವ ತನಿಖಾ ಸಂಸ್ಥೆಗಳ ವಿಚಾರಣೆಗಾಗಿ ಅವರ ವಶಕ್ಕೆ ಒಪ್ಪಿಸಿದೆ’ ಎಂದು ಆಕ್ಷೇಪಿಸಿದರು.</p>.<p>ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ರಾಜ್ಯ ಕಾರಾಗೃಹಗಳ ಡಿಜಿ ಮತ್ತು ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದ ಸೂಪರಿಂಟೆಂಡೆಂಟ್ ಅವರಿಗೆ ಷೋಕಾಸ್ ನೋಟಿಸ್ ಜಾರಿಗಳಿಸಲು ಮತ್ತು ಮುಂದಿನ ವಿಚಾರಣೆ ವೇಳೆಗೆ ಖುದ್ದು ಹಾಜರಿರುವಂತೆ ಆದೇಶಿಸಿದರು. ಇದೇ ವೇಳೆ ನಾಗೇಂದ್ರ ಅವರ ನ್ಯಾಯಾಂಗ ಬಂಧನದ ಅವಧಿಯನ್ನೂ ವಿಸ್ತರಿಸಿ ಆದೇಶಿಸಲಾಯಿತು. ವಿಚಾರಣೆಯನ್ನು ಇದೇ 14ಕ್ಕೆ ಮುಂದೂಡಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>